Wednesday, December 17, 2025
Wednesday, December 17, 2025

Red Cross Sanjeevini Blood Bank ರೆಡ್ ಕ್ರಾಸ್ ವತಿಯಿಂದ ಜೋಗ್ ಫಾಲ್ಸ್ ನಲ್ಲಿ ರಕ್ತದಾನ ಶಿಬಿರ

Date:

Red Cross Sanjeevini Blood Bank 54ನೇ ರಾಷ್ಟೀಯ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಡಿಯಲ್ಲಿ ಶಂಕರನಾರಾಯಣ ನಿರ್ಮಾಣ ಸಂಸ್ಥೆಯು ರೆಡ್ ಕ್ರಾಸ್ ರಕ್ತನಿಧಿ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರವನ್ನು ಜೋಗ ಫಾಲ್ಸ್‍ನಲ್ಲಿ ಆಯೋಜಿಸಲಾಯಿತು.

ರಕ್ತದಾನದ ಬಗ್ಗೆ ಅಲ್ಲಿ ಕೆಲಸ ಮಾಡುತ್ತಿರುವ ಹೊರರಾಜ್ಯದಿಂದ ಬಂದಿರುವ ಕಾರ್ಮಿಕರಿಗೆ ರಕ್ತದಾನದ ಮಹತ್ವವನ್ನು ತಿಳಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದ್ದು, ರೆಡ್ ಕ್ರಾಸ್ ರಕ್ತನಿಧಿಯ ಪ್ರತಿನಿಧಿಗಳಾದ ಡಿ.ಜೆ.ದಿನಕರ್ ರವರು ರಕ್ತದಾನದ ಮಹತ್ವದ ಬಗ್ಗೆ ಅಲ್ಲಿ ನೆರೆದಿದ್ದ ಎಲ್ಲರಿಗೂ ಸವಿಸ್ತಾರವಾಗಿ ತಿಳಿಸಿದರು.

ಎಸ್‍ಎನ್‍ಸಿ ಸಂಸ್ಥೆಯ ಪ್ರಾಜೆಕ್ಟ್ ಮ್ಯಾನೇಜರ್ ಮಾತನಾಡಿ, ರಕ್ತದಾನದ ಪ್ರಯೋಜನಗಳನ್ನು ತಮ್ಮ ಸಿಬ್ಬಂದಿಗಳಿಗೆ ಹಾಗೂ ಕಾರ್ಮಿಕರಿಗೆ ತಿಳಿಸಿ, ತಾವು ರಕ್ತದಾನ ಮಾಡುವುದರ ಮೂಲಕ ಅಲ್ಲಿ ನೆರೆದಿದ್ದ ಎಲ್ಲರಿಗೂ ರಕ್ತದಾನ ಮಾಡಲು ಪ್ರೋತ್ಸಾಹಿಸಿದರು.

ಎಸ್‍ಎನ್‍ಸಿ ಸಂಸ್ಥೆಯು ಆಯೋಜಿಸಿದ್ದ ಈ ರಕ್ತದಾನ ಶಿಬಿರದಲ್ಲಿ ಸುಮಾರು 43 ಜನರು ರಕ್ತದಾನ ಮಾಡಿದರು. ಈ ಕಾರ್ಯಕ್ರಮದಲ್ಲಿ ಶಂಕರನಾರಾಯಣ ಕನ್ಸ್‍ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಪ್ರಾಜೆಕ್ಟ್ ಮ್ಯಾನೇಜರ್ ಸಂದೀಪ್.ಟಿ.ಆರ್, ಅಡ್ಮಿನ್ ಮ್ಯಾನೇಜರ್ ಶಶಿಧರ್ ಶೆಟ್ಟಿ, ಸುರಕ್ಷತಾ ಸಿಬ್ಬಂದಿ ತಬ್ರೇಜ್ ಹಾಗೂ ರೆಡ್ ಕ್ರಾಸ್ ಪ್ರತಿನಿಧಿಗಳಾದ ಡಿ.ಜೆ.ದಿನಕರ್, ಮಂಜುನಾಥ್ ಅಪ್ಪಾಜಿ, ಡಾ. ದಿನಕರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...