Wednesday, May 6, 2026
Wednesday, May 6, 2026

Rotary Shivamogga ರಾಮಾಯಣ, ಮಹಾಭಾರತ ಕಥೆಗಳನ್ನ ಮನೆಯಲ್ಲಿಯೇ ಮಕ್ಕಳಿಗೆ ಹೇಳಬೇಕು- ಉಷಾ ನಟೇಶ್ ಕಾಸರವಳ್ಳಿ

Date:

Rotary Shivamogga ಪ್ರಸ್ತುತ ಮನೆಗಳಲ್ಲಿ ಕಥೆಗಳನ್ನು ಹೇಳುವವರ ಸಂಖ್ಯೆ ಕ್ಷೀಣಿಸುತ್ತಿದ್ದು, ಮೊಬೈಲ್ ಹಾವಳಿಯಿಂದ ಮಕ್ಕಳ ಮನಸ್ಸು ಸಂಕುಚಿತವಾಗುತ್ತದೆ. ಉತ್ತಮ ಕಥೆಗಳನ್ನು ಆಲಿಸುವುದರಿಂದ ಮಕ್ಕಳಲ್ಲಿ ಕ್ರೀಯಾತ್ಮಕ ಆಲೋಚನಾ ಶಕ್ತಿ ವೃದ್ಧಿಯಾಗುತ್ತದೆ ಎಂದು ಲೇಖಕಿ ಉಷಾ ನಟೇಶ್ ಕಾಸರವಳ್ಳಿ ಹೇಳಿದರು.

ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ರಾಮಾಯಣ, ಮಹಾಭಾರತ ಕುರಿತಾದ ಕಥನಗಳನ್ನು ಮಕ್ಕಳಿಗೆ ಬಾಲ್ಯದಲ್ಲಿಯೇ ಹೇಳುವ ಕೆಲಸ ಮನೆಗಳಲ್ಲಿ ಆಗಬೇಕು. ಕಿರುತೆರೆ, ಬೆಳ್ಳಿತೆರೆಗಳನ್ನು ಕಥನಗಳನ್ನು ಪ್ರಸ್ತುತಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಪೊನ್ನಜ್ಜಿ ಕಥೆಗಳು ಬದುಕನ್ನು ಬದಲಾಯಿಸುವ ಜತೆಯಲ್ಲಿ ಮಾನಸಿಕ ಸಾಮಾರ್ಥ್ಯ ವೃದ್ಧಿಸುತ್ತದೆ. ಕಥೆಗಳು ನಮ್ಮ ಬಾಲ್ಯದ ಬದುಕನ್ನು ಉತ್ತಮಗೊಳಿಸುವ ಜತೆಯಲ್ಲಿ ಜೀವನ ಮೌಲ್ಯಗಳನ್ನು ಕಲಿಸುತ್ತವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಅರುಣ್ ದೀಕ್ಷಿತ್ ಮಾತನಾಡಿ, ಯಶಸ್ಸಿನ ಕಥೆಗಳು ಎಲ್ಲರ ಬದುಕಿಗೂ ಸ್ಪೂರ್ತಿಯಾಗುತ್ತದೆ. ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಪ್ರೇರಕ ಶಕ್ತಿಯಾಗುತ್ತವೆ. ಬಾಲ್ಯದಲ್ಲಿ ಮಕ್ಕಳಿಗೆ ಜೀವನಮೌಲ್ಯ ತಿಳಿಸುವ ನೀತಿ ಕಥೆಗಳನ್ನು ಕಲಿಸಬೇಕು ಎಂದು ಹೇಳಿದರು.

Rotary Shivamogga ಆಕಾಶವಾಣಿ ಕಲಾವಿದರಾದ ಉಷಾ ನಟೇಶ್ ಕಾಸರವಳ್ಳಿ ಅವರನ್ನು ಸನ್ಮಾನಿಸಲಾಯಿತು. ನಂತರ ಸದಸ್ಯರೊಂದಿಗೆ ಸಂವಾದ ನಡೆಸಲಾಯಿತು. ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಶಶಿಕಾಂತ್ ನಾಡಿಗ್, ಡಾ. ಪರಮೇಶ್ವರ ಶಿಗ್ಗಾವ್, ನಟೇಶ್ ಕಾಸರವಳ್ಳಿ, ಎಚ್.ಬಿ.ಆದಿಮೂರ್ತಿ, ಡಾ. ಅರುಣ್, ಡಾ. ಧನಂಜಯ, ಎನ್.ಎಚ್.ಶ್ರೀಕಾಂತ್, ಕಿಶೋರ್‌ಕುಮಾರ್, ಗಣೇಶ್, ಶ್ರೀನಿವಾಸ್, ಕೃಷ್ಣಮೂರ್ತಿ, ರೋಟರಿ ಶಿವಮೊಗ್ಗ ಪೂರ್ವ, ಇನ್ನರ್‌ವ್ಹೀಲ್ ಶಿವಮೊಗ್ಗ ಸದಸ್ಯೆಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...