Puttaraj Gawai ಪದ್ಮಭೂಷಣ ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ ೧೧೧ನೇ ಜನ್ಮದಿನ ಸಮಾರಂಭವು ಸಾಗರ ರಸ್ತೆ ಅಂಧ ಮಕ್ಕಳ ಸಂಗೀತ ವಿದ್ಯಾಲಯ ಶ್ರೀ ವೀರೇಶ್ವರ ಪುಣ್ಯಾಶ್ರಮ ಸಂಸ್ಕೃತ ಪಾಠ ಶಾಲೆಯಲ್ಲಿ ನೆರವೇರಿತು. ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮಿಗಳು ಸಾನ್ನಿಧ್ಯ ವಹಿದ್ದರು. ಪುಣ್ಯಾಶ್ರಮದ ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಚಾರ್ಟೆಡ್ ಅಕೌಂಟೆAಟ್ ನರೇಂದ್ರ ಕೆ.ವಿ., ಮರುಳಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ಧಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ವಾಗೇಶ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಾಗರದ ಖ್ಯಾತ ಹಿಂದೂಸ್ಥಾನಿ ಗಾಯಕಿ ವಿದೂಶಿ ಶ್ರೀಮತಿ ವಸುಧಾ ಶರ್ಮ ಅವರಿಗೆ ಶ್ರೀ ಗುರು ಗಾನಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಗಣ್ಯರು ಭಾಗವಹಿಸಿದ್ದರು.
Puttaraj Gawai ಪುಣ್ಯಾಶ್ರಮದಲ್ಲಿ ವಿದುಷಿ ವಸುಧಾ ಶರ್ಮಾ ಅವರಿಗೆ ಗಾನಭೂಷಣ ಪ್ರಶಸ್ತಿ ಪ್ರದಾನ
Date: