Thursday, March 26, 2026
Thursday, March 26, 2026

KMF Nandini ಹಾಲಿನ ದರ ಏರಿಕೆ ಪ್ರಸ್ತಾಪ ಕೂಡಲೇ ಕೈ ಬಿಡಿ. ಹೋಟೆಲ್ ಮಾಲೀಕರ ಆಗ್ರಹ

Date:

KMF Nandini ಪ್ರಸ್ತಾಪಿತ ನಂದಿನಿ ಹಾಲಿನ ಬೆಲೆ ಅಂದಾಜು 5 ರೂಪಾಯಿ ದರ ಏರಿಕೆ ಪ್ರಸ್ತಾಪಕ್ಕೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ (ಕೆಎಸ್‌ಎಚ್‌ಎ) ವಿರೋಧ ವ್ಯಕ್ತಪಡಿಸಿದೆ.

ಈ ಸಂಬoಧ ರಾಜ್ಯ ಸರಕಾರ ಹಾಗು ಕರ್ನಾಟಕ ಹಾಲು ಮಹಾಮಂಡಳ (ಕೆ.ಎಂ.ಎಫ್) ಗಳಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಶ್ರೀ ಜಿ.ಕೆ ಶೆಟ್ಟಿ, ಒಂದೊಮ್ಮೆ ದರ ಹೆಚ್ಚಳ ಮಾಡಿದರೆ ಹೋಟೆಲ್ ಉದ್ಯಮದ ಮೇಲೆ ಅದು ದೊಡ್ಡ ಮಟ್ಟದ ನಕಾರಾತ್ಮಕ ಪರಿಣಾಮ ಬೀರಲಿದೆ ಎಂಬ ಕಳವಳ ವ್ಯಕ್ತಪಡಿಸಿದ್ದಾರೆ.

ಕಾಫಿ ಪುಡಿ ದರ ಆಕಾಶಕ್ಕೇರಿದೆ. ಈಗ ಹಾಲಿನ ಬೆಲೆ ಹೆಚ್ಚಳಗೊಂಡರೆ ಚಹಾ, ಕಾಫಿ ಯಂತಹ ನಾನಾ ಬಿಸಿ ಪಾನೀಯಗಳ ಬೆಲೆ ಏರಿಕೆ ಹೋಟೆಲ್ ಮಾಲೀಕರಿಗೆ ಅನಿವಾರ್ಯವಾಗಲಿದೆ. ಇದು ರಾಜ್ಯದಲ್ಲಿ ಲಕ್ಷಾಂತರ ಕುಟುಂಬಗಳಿಗೆ ಜೀವನಾಧಾರವಾಗಿರುವ ಹಾಗು ಸರಕಾರ ಹಾಗು ಸ್ಥಳೀಯ ಸಂಸ್ಥೆಗಳಿಗೆ ದೊಡ್ಡ ಮಟ್ಟದ ತೆರಿಗೆ ಮೂಲವಾಗಿರುವ ಹೋಟೆಲ್ ಉದ್ಯಮ ಕ್ಷೇತ್ರಕ್ಕೆ ಕಂಟಕ ಪ್ರಾಯವಾಗುವ ಸಾಧ್ಯತೆ ಇದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

“ಹೋಟೆಲ್ ಗಳು ತಮ್ಮ ಗ್ರಾಹಕರಿಗೆ ಆಹಾರ ಸುರಕ್ಷತಾ ನೀತಿಗೆ ಅನುಗುಣವಾಗಿ ಎಲ್ಲ ಶುಚಿತ್ವ ಹಾಗು ಗುಣಮಟ್ಟದ ನೀತಿಗಳನ್ನು ಅನುಸರಿಸುತ್ತಾ ಗುಣಮಟ್ಟದ ಚಹಾ, ಕಾಫಿ, ಹಾಗು ಇತರ ಪಾನೀಯಗಳನ್ನು ಒದಗಿಸುತ್ತವೆ. ಒಚಿದೊಮ್ಮೆ ಹಾಲಿನ ದರ ಹೆಚ್ಚಳಗೊಂಡರೆ, ಇವುಗಳ ಬೆಲೆ ಏರಿಕೆ ಅನಿವಾರ್ಯವಾಗಲಿದೆ. ಆಗ ಗ್ರಾಹಕರು ಅಗ್ಗದ ದರದಲ್ಲಿ ದೊರೆಯುವ ಆದರೆ ಯಾವುದೇ ಸುರಕ್ಷತಾ ಮಾನದಂಡಗಳನ್ನು ಅನುಸರಿಸದೆ ಮಾರಾಟ ಮಾಡಲಾಗುವ ಚಹಾ, ಕಾಫಿ ಸೇವನೆ ಆರಂಭಿಸಬಹುದು.

ಇದು ಸಾರ್ವಜನಿಕ ಆರೋಗ್ಯದ ಮೇಲೆ ದೊಡ್ಡ ಮಟ್ಟದ ಪ್ರತಿಕೂಲ ಪರಿಣಾಮ ಬೀರಬಹುದು ಎಂದು,” ಅವರು ಎದ್ಚರಿಸಿದ್ದಾರೆ.

ಸರಕಾರ ಸಾರ್ವಜನಿಕ ಆರೋಗ್ಯ ಮತ್ತು ಹೋಟೆಲ್ ಉದ್ಯಮದ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು, ಹಾಲಿನ ಬೆಲೆ ಏರಿಕೆ ಪ್ರಸ್ತಾಪವನ್ನು ತಕ್ಷಣ ಕೈ ಬಿಡುವಂತೆ ಅವರು ಆಗ್ರಹಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 98440 06736 ಸಂಪರ್ಕಿಸಬಹುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...