Friday, March 14, 2025
Friday, March 14, 2025

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

Date:

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ ರಿಲಯನ್ಸ್ ರಿಟೇಲ್ ಲಿ., ರಿಲಯನ್ಸ್ ಡಿಜಿಟಲ್ ಶಿವಮೊಗ್ಗ ಇವರ ವಿರುದ್ದ ರೆಫ್ರಿಜರೇಟರ್‌ಗೆ ಸಂಬಂಧಿಸಿದಂತೆ ಸೇವಾನ್ಯೂನತೆ ಕುರಿತು ಸಲ್ಲಿಸಿದ್ದ ದೂರನ್ನು ಪುರಸ್ಕರಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದೆ.

ಅರ್ಜಿದಾರರಾದ ಎಸ್ ವಿ ಲೋಹಿತಾಶ್ವ ಇವರು ರಿಲಯನ್ಸ್ ಡಿಜಿಟಲ್ ಶಿವಮೊಗ್ಗ ಇಲ್ಲಿ ರೆಫ್ರಿಜರೇಟರ್‌ನ್ನು ಕೊಂಡಿದ್ದು 02 ವರ್ಷಗಳ ವಾರಂಟಿ ನೀಡಿರುತ್ತಾರೆ. ಸದರಿ ರೆಫ್ರಿಜರೇಟರ್ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲವೆಂದು ಹಾಗೂ ಕೂಲ್ ಆಗುತ್ತಿಲ್ಲವೆಂದು ಎದುರುದಾರರಿಗೆ ಹಲವಾರು ಬಾರಿ ದೂರಿತ್ತರೂ ಹಾಗೂ ರೆಫ್ರಿಜರೇಟರ್ ವಾರಂಟಿ ಅವಧಿಯೊಳಗಿದ್ದರೂ ಎದುರುದಾರರು ರೆಫ್ರಿಜರೇಟರ್‌ನ್ನು ರಿಪೇರಿ ಮಾಡದೇ ಸೇವಾ ನ್ಯೂನತೆ ಎಸಗಿದ್ದಾರೆಂದು ಆಯೋಗದ ಮುಂದೆ ದೂರನ್ನು ಸಲ್ಲಿಸಿರುತ್ತಾರೆ.

ಆಯೋಗದ ನೋಟಿಸ್‌ಗೂ ಹಾಜರಾಗದ ಕಾರಣ ಎದುರುದಾರರನ್ನು ಏಕ ಪಕ್ಷೀಯವೆಂದು ಮಾಡಿ, ದೂರುದಾರರು ಸಲ್ಲಿಸಿರುವ ಪ್ರಮಾಣ ಪತ್ರ ಮತ್ತು ದಾಖಲೆಗಳನ್ನು ಪರಿಶೀಲಿಸಿ ಮತ್ತು ದೂರುದಾರ ವಕೀಲರ ವಾದವನ್ನು ಆಲಿಸಿದ ಆಯೋಗವು, ದೂರುದಾರರು ಹಲವಾರು ಬಾರಿ ರೆಫ್ರಿಜರೇಟರನ್ನು ರಿಪೇರಿ ಮಾಡಿಕೊಡಲು ವಿನಂತಿಸಿರುವುದು ದಾಖಲೆಗಳಿಂದ ಸಾಬೀತಾಗಿರುವುದಾಗಿ ಮತ್ತು ದೂರುದಾರರು ಸಲ್ಲಿಸಿರುವ ದಾಖಲೆಗಳನ್ನಾಗಲಿ ಅಥವಾ ದೂರುದಾರರು ಮಾಡಿರುವ ಆರೋಪವನ್ನಾಗಲಿ ಅಲ್ಲಗಳೆಯಲು ಎದುರುದಾರರು ಈ ಆಯೋಗದ ಮುಂದೆ ಹಾಜರಾಗಿ ಯಾವುದೇ ದಾಖಲೆಗಳನ್ನು ಸಲ್ಲಿಸಿರುವುದಿಲ್ಲವಾದ್ದರಿಂದ ಎದುರುದಾರರು ಸೇವಾ ನ್ಯೂನತೆ ಎಸಗಿರುವುದಾಗಿ ಪರಿಗಣಿಸಲಾಗಿದೆ.

District Consumer Disputes Redressal Commission ಎದುರುದಾರರು ಈ ಆದೇಶವಾದ 45 ದಿನಗಳ ಒಳಗಾಗಿ ರೆಫ್ರಿಜರೇಟರ್‌ನ್ನು ರಿಪೇರಿ ಮಾಡಿ ನೀಡಬೇಕು ಹಾಗೂ ಒಂದು ವೇಳೆ ರಿಪೇರಿ ಮಾಡಲು ಸಾಧ್ಯವಾಗದಿದ್ದ ಪಕ್ಷದಲ್ಲಿ, ದೂರುದಾರರು ರೆಫ್ರಿಜರೇಟರ್‌ನ್ನು ಒಂದೂವರೆ ವರ್ಷಗಳ ಕಾಲ ಉಪಯೋಗಿಸುವುದರಿಂದ ಖರೀದಿ ಬೆಲೆಗೆ ಶೇ.10 ಸವಕಳಿಯನ್ನು ಹಾಗೂ ಜಿಎಸ್‌ಟಿಯನ್ನು ಕಳೆದು ರೂ.27,312 ನ್ನು ದೂರುದಾರರಿಂದ ರೆಫ್ರಿಜರೇಟರ್ ಹಿಂಪಡೆದು ನೀಡಲು ಹಾಗೂ ರೂ.5,000/- ಗಳನ್ನು ಮಾನಸಿಕ ಹಿಂಸೆಗಾಗಿ ಮತ್ತು ರೂ.10,000 ಗಳನ್ನು ವ್ಯಾಜ್ಯದ ಖರ್ಚಾಗಿ ನೀಡಬೇಕೆಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ. ಶಿವಣ್ಣ, ಸದಸ್ಯರಾದ ಬಿ.ಡಿಯೋಗಾನಂದ ಭಾಂಡ್ಯ ಅವರನ್ನೊಳಗೊಂಡ ಪೀಠವು ಮಾ.11 ರಂದು ಆದೇಶಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...

Klive Special ಹೆತ್ತವಳಿಗೊಂದು ಕವನ-ನಮನ

Klive Special ದೇವರ ಸ್ವರೂಪ ಗರ್ಭದಲ್ಲಿ ಹೊತ್ತುನವಮಾಸಕ್ಕೆ ಹೆತ್ತುಮೌಲ್ಯಗಳನ್ನೇ ಬಿತ್ತುಸಲಹಿದೆ ನೀಡಿ ಕೈತುತ್ತು ಅಮ್ಮ...