Monday, March 17, 2025
Monday, March 17, 2025

K.S. Eshwarappa ಕಾಂಗ್ರೆಸ್ ಸರ್ಕಾರದ ನಡವಳಿಕೆ ಯಾರಿಗೂ ನೆಮ್ಮದಿ ತರುತ್ತಿಲ್ಲ :ಕೆ.ಎಸ್​.ಈಶ್ವರಪ್ಪ

Date:

K.S. Eshwarappa ಮಾಸೂರಿನ ಯುವತಿ ಸ್ವಾತಿ ಹತ್ಯೆ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರದ ನಡವಳಿಕೆ ಯಾರಿಗೂ ನೆಮ್ಮದಿ ತರುತ್ತಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪ ಆರೋಪಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸ್ವಾತಿಯನ್ನು ಲವ್​ ಜಿಹಾದ್​ ಮೂಲಕ ಬಲೆಗೆ ಬೀಳಿಸಿಕೊಂಡು ಕಾರಿನಲ್ಲಿ ಕರೆದುಕೊಂಡು ಹೋಗಿ ಕುತ್ತಿಗೆ ಬಿಗಿದು ಸಾಯಿಸಿ ನದಿಗೆ ಬಿಸಾಕಿ ಹೋಗುವ ರಾಕ್ಷಿಸಿ ಕೃತ್ಯದ ಬಗ್ಗೆ ಸಿಎಂ ಆದಿಯಾಗಿ ಯಾರೊಬ್ಬರೂ ಖಂಡನೆ ಮಾಡಿಲ್ಲ. ಸಿಎಂ ಹಾಗೂ ಡಿಸಿಎಂ ಮಾತೆತ್ತಿದರೆ ನೀವು ಮುಸಲ್ಮಾನ್​ ವಿರೋಧಿ ಎನ್ನುತ್ತಾರೆ. ಸ್ವಾತಿ ನಿಮ್ಮ ಮಗಳೇ ಆಗಿದ್ದರೆ ನೀವು ಸುಮ್ಮನಿರುತ್ತಿದ್ದರೆ ಎಂದು ಪ್ರಶ್ನಿಸಿದ ಈಶ್ವರಪ್ಪ ಸ್ವಾತಿಯ ಮೃತ ದೇಹ ನದಿಯಿಂದ ಮೇಲಕ್ಕೆ ಬರುತ್ತಿದ್ದಂತೆಯೇ ಪೊಲೀಸರು ಆತುರದಿಂದ ಶವ ಸಂಸ್ಕಾರ ಮಾಡಿದ್ದಾರೆ ಎಂದರು.
K.S. Eshwarappa ಸ್ವಾತಿ ಹತ್ಯೆ ಪ್ರಕರಣ ಇಡೀ ರಾಜ್ಯದ ಜನ ತಲೆ ತಗ್ಗಿಸುವ ಕೆಲಸ. ಒಂದು ವೇಳೆ ಮುಸ್ಲಿಮ್​ ಯುವತಿಯನ್ನು ಯಾರಾದರೊಬ್ಬ ಹಿಂದೂ ಯುವಕ ಸಾಯಿಸಿ ಬಿಸಾಕಿದ್ದರೆ ನೀವು ಬೆಂಕಿ ಹಚ್ಚುತ್ತಿದ್ದರಲ್ಲವೆ. ರಾಜ್ಯದಲ್ಲಿ ಹಿಂದೂ ಹೆಣ್ಣು ಮಕ್ಕಳು ಎಂದರೆ ಬೆಲೆಯೆ ಇಲ್ಲದಂತಾಗಿದೆ. ಹಾಗಾಗಿ ಹಿಂದೂ ಹೆಣ್ಣು ಮಕ್ಕಳು ರಾಕ್ಷಸಿ ಮುಸಲ್ಮಾನ ಗೂಂಡಾಗಳ ಬಗ್ಗೆ ಎಚ್ಚರದಿಂದರಬೇಕು. ಹಾಗೆಯೇ ಹೆಣ್ಣು ಮಕ್ಕಳು ಈ ರೀತಿ ದುರ್ಬಳಕೆ ಮಾಡಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾಯ್ದೆ ಜಾರಿಗೆ ಬರಬೇಕು ಎಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಮಾರ್ಚ್ 18. ಜನಸಂಪರ್ಕ ಸಭೆ

Kumsi MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ...

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...