Friday, March 20, 2026
Friday, March 20, 2026

Karnataka Upalokayukta ಇಂದಿನಿಂದ ಉಪಲೋಕಾಯುಕ್ತನ್ಯಾ.ಕೆ.ಎನ್.ಫಣೀಂದ್ರ ಅವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

Date:

Karnataka Upalokayukta ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18 ರಿಂದ 21 ರವರೆಗೆ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು ಅಲ್ಲದೇ ಇದೇ ಅವಧಿಯಲ್ಲಿ ವಿವಿಧ ಸಭೆ-ಸಮಾರಂಭ, ತರಬೇತಿ ಕಾರ್ಯಾಗಾರಗಳು, ಸಮಾಲೋಚನಾ ಸಭೆಗಳಲ್ಲಿ ಭಾಗವಹಿಸುವರು.
ಮಾ.18ರಂದು ಸಂಜೆ 7.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಮಾ.19ರಂದು ಬೆಳಿಗ್ಗೆ 10.00 ರಿಂದ ಸಂಜೆ 5.00 ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ/ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬನೆಯಾಗಿದ್ದಲ್ಲಿ ಅಥವಾ ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಅರ್ಜಿ ನಮೂನೆ 1 ಮತ್ತು 2 ರಲ್ಲಿ ಲಿಖಿತವಾಗಿ ದಾಖಲೆ, ಸಸಾಕ್ಷಾಧಾರಗಳೊಂದಿಗೆ ಸಲ್ಲಿಸಬಹುದಾಗಿದೆ.
Karnataka Upalokayukta ಮಾ.20 ರಂದು ಬೆಳಿಗ್ಗೆ 11.00 ರಿಂದ 11.30 ರವರೆಗೆ ನಗರದ ಜಿಲ್ಲಾ ಪಂಚಾಯಿತಿಯ ನಜೀರ್ ಸಾಬ್ ಸಭಾಂಗಣದಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ/ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಪರಿಹರಿಸುವ ಕುರಿತು ದೂರುದಾರರು ಮತ್ತು ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸುತ್ತಾರೆ. ಈ ಸಮಯದಲ್ಲಿ ದೂರುದಾರರು ಮತ್ತು ಎದುರುದಾರರ ಹಾಜರಿದ್ದು ಇದರ ಸದುಪಯೋಗಪಡೆದುಕೊಳ್ಳುವಂತೆ ಶಿವಮೊಗ್ಗ ಲೋಕಾಯುಕ್ತ ಇಲಾಖೆಯ ಪೊಲೀಸ್ ಅಧೀಕ್ಷಕ ಮಂಜುನಾಥ ಚೌದರಿ. ಎಂ.ಹೆಚ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...