Thursday, April 16, 2026
Thursday, April 16, 2026

International Women’s Day ಮಹಿಳೆ ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡಬೇಕು-ಕೆ.ವಿ.ಯಶೋದಾ ರಾಜಣ್ಣ

Date:

International Women’s Day ಮಹಿಳೆಯರು ಪ್ರತಿಯೊಂದು ಕ್ಷೇತ್ರಗಳಲ್ಲಿ ಯಶಸ್ಸಿನ ಹಾದಿಯಲ್ಲಿ ಮುನ್ನಡೆಯುತ್ತಿದ್ದಾರೆ ಎಂದು ಕಾವೇರಿ ನದಿ ರಕ್ಷಣಾ ಸಮಿತಿ ಕಾರ್ಯಾಧ್ಯಕ್ಷೆ ಕೆ.ವಿ.ಯಶೋಧ ರಾಜಣ್ಣ ಅಭಿಪ್ರಾಯಪಟ್ಟರು.
ಭದ್ರಾವತಿಯಲ್ಲಿ ಚುಂಚಾದ್ರಿ ಮಹಿಳಾ ವೇದಿಕೆಯಿಂದ ರೋಟರಿ ಕ್ಲಬ್ ಆವರಣದಲ್ಲಿ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಉದ್ಯಮ, ಶಿಕ್ಷಣ, ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಉನ್ನತ ಸಾಧನೆ ಮಾಡಬೇಕು ಎಂದು ತಿಳಿಸಿದರು.
ಚುಂಚಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಆರ್. ಅನುರಾಧ ಪಟೇಲ್ ಮಾತನಾಡಿ, ಅನೇಕ ಸಮಾಜಮುಖಿ ಕೆಲಸಗಳಲ್ಲಿ ಮಹಿಳೆಯರು ಸಾಧನೆ ಮಾಡಿ ಸಮಾಜಕ್ಕೆ ಗೌರವ ತಂದಿದ್ದಾರೆ. ಅವರೆಲ್ಲರೂ ನಮಗೆ ಆದರ್ಶ. ಸ್ಥಳೀಯವಾಗಿಯೂ ಸಾಧನೆ ಮಾಡಿದ ಅನೇಕ ಮಹಿಳೆಯರು ನಮ್ಮಲ್ಲಿ ಇದ್ದಾರೆ. ಮುಂದೆ ಸಹ ಇನ್ನೂ ಹೆಚ್ಚಿನ ಸಮಾಜಮುಖಿ ಕೆಲಸಗಳನ್ನು ಮಾಡಿ ಮನೆಗೂ, ಕುಟುಂಬಕ್ಕೂ ಸಮಾಜಕ್ಕೂ ಕೀರ್ತಿ ತರಬೇಕು ಎಂದರು.
International Women’s Day ಚುಂಚಾದ್ರಿ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಧಾಮಣಿ ವೆಂಕಟೇಶ್ ಹಾಗೂ ಎಲ್ಲಾ ಪದಾಧಿಕಾರಿಗಳು ಕಾರ್ಯಕ್ರಮವನ್ನು ಅದ್ದೂರಿಯಾಗಿ ಯಶಸ್ವಿಯಾಗಿ ನೆರವೇರಿಸಿದರು. ಸುಧಾ ವೆಂಕಟೇಶ ಅವರು ಎಲ್ಲಾ ಮಹಿಳೆಯರಿಗೂ ಮಹಿಳಾ ದಿನಾಚರಣೆ ಶುಭಾಶಯ ಕೋರಿದರು.
ಮಂಡ್ಯ ಕನ್ನಡ ಸಾಹಿತ್ಯ ಪರಿಷತ್‌ನ ಸುಜಾತ ಕೃಷ್ಣ, ಅಂಭ್ರಣಿ ಸಾಂಸ್ಕೃತಿಕ ವೇದಿಕೆ ಶಿವಮೊಗ್ಗ ಅಧ್ಯಕ್ಷೆ ಗಾಯತ್ರಿ ಯಲ್ಲಪ್ಪ ಗೌಡ, ಅಖಿಲ ಕರ್ನಾಟಕ ಒಕ್ಕಲಿಗರ ಸಂಘ ಮಹಿಳಾ ಘಟಕ ಹಾಸನ ಕಾರ್ಯಾಧ್ಯಕ್ಷೆ ಸುಧಾಮಣಿ, ಅಖಿಲ ಕರ್ನಾಟಕ ಒಕ್ಕಲಿಗರ ಸಂಘ ಹಾಸನ ಜಿಲ್ಲಾಧ್ಯಕ್ಷೆ ತಾರಾಮಣಿ, ನಳಿನಿ ಪ್ರವೀಣ್, ರೋಟರಿ ಕ್ಲಬ್ ಭದ್ರಾವತಿ ಅಧ್ಯಕ್ಷೆ ಜಿ ರಾಘವೇಂದ್ರ ಉಪಾಧ್ಯಾಯ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಗುಡ್ ಲಕ್ ಆರೈಕೆ ಕೇಂದ್ರದಲ್ಲಿನ ಅನಾಥ ಮಹಿಳೆಯರಿಗೆ ಭಾವನಾ ಜೆಸಿಐನಿಂದ ಉಡುಪು ವಿತರಣೆ

JCI Shivamogga ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಭಾವನದಿಂದ ಗುಡ್...

Brahmakumari Ishwariya University ಆಧ್ಯಾತ್ಮ , ಧ್ಯಾನ ಮತ್ತು ಯೋಗ ಮನುಷ್ಯನ ನೈಜ ಸಂಪತ್ತು-ಬ್ರಹ್ಮಕುಮಾರಿ ಸ್ವಾತಿ

Brahmakumari Ishwariya University ಒತ್ತಡ ಮತ್ತು ಅಶಾಂತಿಯ ಜೀವನಶೈಲಿಯಲ್ಲಿ ಬದುಕುತ್ತಿರುವ ಜನರಿಗೆ...

Dr. B.R. Ambedkar ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ 19 ಜನಕ್ಕೆ ಜೀವ ವಿಮಾ ಬಾಂಡ್ ವಿತರಣೆ

Dr. B.R. Ambedkar ಶಿವಮೊಗ್ಗ ಜಿಲ್ಲೆಯ ಹೊಳೆ ಬೆನವಲ್ಲಿ ಗ್ರಾಮದಲ್ಲಿ ಸಂವಿಧಾನ...

VISL ಡಾ.ಅಂಬೇಡ್ಕರ್ ಮತ್ತು ವಿಶ್ವೇಶ್ವರಯ್ಯನವರ ಜೀವನದ ವಿಚಾರಗಳು ಮಕ್ಕಳಿಗೆ ಅಗತ್ಯ- ಬಿ.ವಿಶ್ವನಾಥ್

VISL ವಿಐಎಸ್‌ಎಲ್ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ದ ಆಯೋಜಿಸಲಾಗಿತ್ತು. ಈ...