Thursday, March 26, 2026
Thursday, March 26, 2026

Department of Entrepreneurship and Livelihoods ಮಹಿಳೆಯರು ತಯಾರಿಸಿರುವ ಕರಕುಶಲ ಉತ್ಪನ್ನಗಳನ್ನ ಖರೀದಿಸಿ ಬೆಂಬಲಿಸಿ- ಡಾ.ಶಾಲಿನಿ ರಜನೀಶ್

Date:

Department of Entrepreneurship and Livelihoods ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಬೆಂಗಳೂರಿನ ಐಎಎಸ್ ಅಸೋಸಿಯೇಷನ್‌ನಲ್ಲಿ ಮಾರ್ಚ್ 21ರವರೆಗೆ ಮೂರು ದಿನಗಳು ಆಯೋಜಿಸಿರುವ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನ ಮೇಳವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.

ಈ ವಿಶೇಷ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ‌ ರಜನೀಶ್ ಅವರು ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನ ಮಾರಾಟ ಹಾಗೂ ಪ್ರದರ್ಶನ ಮೇಳ ಉದ್ಘಾಟಿಸಿರುವುದು ಹೆಮ್ಮೆಯ ವಿಷಯವಾಗಿದೆ. ಈ ಮೇಳದಲ್ಲಿ ಮಹಿಳೆಯರು ತಯಾರಿಸಿರುವ ಅನೇಕ ಕರಕುಶಲ ಹಾಗೂ ಕಸೂತಿ ಉತ್ಪನ್ನಗಳನ್ನು ನೋಡೋದಷ್ಟೇ ಅಲ್ಲದೇ ಅವುಗಳನ್ನು ಖರೀದಿಸಿ ಸ್ವ-ಸಹಾಯ ಗುಂಪುಗಳ ಮಹಿಳೆಯರನ್ನು ಬೆಂಬಲಿಸಬೇಕು ಎಂದು ಹೇಳಿದರು.

ಈ ಮಾರಾಟ ಹಾಗೂ ಪ್ರದರ್ಶನ ಮೇಳದಲ್ಲಿ ರಾಜ್ಯದ ವಿವಿಧ ಮಹಿಳಾ ಸ್ವ-ಸಹಾಯ ಗುಂಪುಗಳ ಕೌಶಲ್ಯದಿಂದ ತಯಾರಿಸಲ್ಪಟ್ಟ ಉತ್ಪನ್ನಗಳ 60 ಮಳಿಗೆಗಳಿದ್ದು, ಪ್ರಮುಖವಾಗಿ ವಿವಿಧ ಬಗೆಯ ಹ್ಯಾಂಡ್‌ಲೂಮ್ ಸೀರೆಗಳು, ಆಹಾರ ಉತ್ಪನ್ನಗಳು, ಕಿನ್ನಾಳ ಆಟಿಕೆ, ಚನ್ನಪಟ್ಟಣ ಬೊಂಬೆಗಳು, ಇಳಕಲ್ ಸೀರೆ, ಬಿದರಿ ಕಲೆ, ಮನೆ ಅಲಂಕಾರಿಕ ಗಿಡಗಳು, ವಸ್ತುಗಳು ಮೇಳದ ಪ್ರಮುಖ ಆಕರ್ಷಣೆಯಾಗಿವೆ ಎಂದು ತಿಳಿಸಿದರು.

Department of Entrepreneurship and Livelihoods ಕರ್ನಾಟಕ ರಾಜ್ಯದಲ್ಲಿ 1964 ರಿಂದ 2024ರ ವರೆಗೆ ಸೇವೆ ಸಲ್ಲಿಸಿರುವ ಹಾಗೂ ಸೇವೆಯಲ್ಲಿರುವ ಭಾರತೀಯ ಆಡಳಿತ ಸೇವೆಯ ಮಹಿಳಾ ಅಧಿಕಾರಿಗಳ ವಿವರಗಳನ್ನೊಳಗೊಂಡ ಡೈರೆಕ್ಟರಿಯನ್ನೂ ಬಿಡುಗಡೆಗೊಳಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ಏಕರೂಪ್ ಕೌರ್ ಮತ್ತು ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...