Sunday, December 7, 2025
Sunday, December 7, 2025

S.N Channabasappa ಶಾಸಕರ ಅಮಾನತು, ವಿಪಕ್ಷಗಳ ಧ್ವನಿ ಹತ್ತಿಕ್ಕುವ ಹುನ್ನಾರ- ಅಮಾನಾತಾದ ಶಾಸಕ ಚೆನ್ನಿ ಹೇಳಿಕೆ

Date:

S.N Channabasappa ಪ್ರಜಾಪ್ರಭುತ್ವದ ಹೆಸರಿನಲ್ಲಿ ‘ತುಘಲಕ್‌’ ಸರ್ಕಾರ ನಡೆಯುತ್ತಿರುವ ದಬ್ಬಾಳಿಕೆಗೆ ನಮ್ಮ ಧಿಕ್ಕಾರ!!! ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬಾರದು ಎಂಬುದು ಭಾರತ ಸಂವಿಧಾನದ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಪಷ್ಟ ನಿಲುವು. ಆದರೂ, ಕಾಂಗ್ರೆಸ್ ಸರ್ಕಾರ ತನ್ನ ಮತ ಬ್ಯಾಂಕ್‌ ರಾಜಕೀಯದ ಅನುಕೂಲಕ್ಕಾಗಿ ತುಷ್ಟೀಕರಣ ರಾಜಕಾರಣ ನಡೆಸುತ್ತಾ, ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಹಂತದಲ್ಲೂ ಮೀಸಲಾತಿ ನೀಡುವ ಅಸಂವಿಧಾನಿಕ ನಡೆ ಕೈಗೊಂಡಿರುವುದು ತೀವ್ರ ಖಂಡನೀಯ! ಇದು ದೇಶದ ಸಮಾನತೆ ತತ್ವದ ವಿರುದ್ಧವಾಗಿದ್ದು, ಸಮಾಜದಲ್ಲಿ ಭಿನ್ನತೆ ಉಂಟುಮಾಡಿ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವ ದಿಕ್ಕಿನ ಹೆಜ್ಜೆಯಾಗಿದೆ.

ಇದೆಲ್ಲದರ ಜೊತೆಗೆ, 40ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರ ಮೇಲೆ ಹನಿಟ್ರ್ಯಾಪ್ ಪ್ರಕರಣಗಳ ಆರೋಪಗಳು ಕೇಳಿ ಬಂದಿದ್ದು, ಇಂತಹ ಗಂಭೀರ ಪ್ರಕರಣಗಳ ತನಿಖೆಗೆ ಆದ್ಯತೆ ನೀಡದೆ, ಕಾಂಗ್ರೆಸ್ ಸರ್ಕಾರ ಜನರ ಗಮನವನ್ನು ಬೇರೆಡೆ ಹರಿಸುತ್ತಿರುವುದು ಕಾಂಗ್ರೆಸ್ ಪಕ್ಷದ ನೀತಿಯನ್ನು ಎತ್ತಿ ತೋರುತ್ತಿದೆ.

ಸಿದ್ಧರಾಮಯ್ಯ ಸರ್ಕಾರ ನಡೆಸುತ್ತಿರುವ ಅನ್ಯಾಯ ಮತ್ತು ಅಕ್ರಮಗಳನ್ನು ವಿರೋಧಿಸಿ, ಸಿಬಿಐ ತನಿಖೆಗೆ ಒತ್ತಾಯಿಸಿದ್ದ ವಿರೋಧಪಕ್ಷದ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಕೇವಲ ವಿರೋಧ ಪಕ್ಷದ ಧ್ವನಿಯನ್ನು ಅಡಗಿಸುತ್ತಿರುವುದಲ್ಲದೆ, ಪ್ರಜಾಪ್ರಭುತ್ವದ ಮೂಲ ತತ್ವಗಳನ್ನೇ ತುಳಿಯುತ್ತಿದೆ. ಈ ಕ್ರಮ ಟಿಪ್ಪು ಸರ್ಕಾರದ ಸರ್ವಾಧಿಕಾರಿ ನಿಲುವನ್ನು ನೆನಪಿಸುತ್ತಿದೆ.

S.N Channabasappa ಈ ಅಮಾನತನ್ನು ಪಕ್ಷಪಾತಿ ವಿಧಾನಸಭೆಯ ಸ್ಪೀಕರ್, ಶ್ರೀ ಯು.ಟಿ. ಖಾದರ್ ತಕ್ಷಣವೇ ಹಿಂಪಡೆಯಬೇಕು, ಇಲ್ಲದಿದ್ದರೆ ಸೋ ಕಾಲ್ಡ್ ಬಂಧುಗಳ ಬಕೆಟ್ ಹಿಡಿಯುತ್ತಿರುವ ಸರ್ಕಾರದ ವಿರುದ್ಧ ಹಾಗೂ ಸಮಾಜದ ನ್ಯಾಯ ಮತ್ತು ಶಾಸಕರ-ವಿಧಾನಸಭೆಯ ಘನತೆಯನ್ನು ಮತ್ತು ರಾಜ್ಯದ ಮರ್ಯಾದೆಯನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ಸದಾ ಮುಂದುವರಿಯುತ್ತದೆ…!

ಎಸ್ ಎನ್ ಚನ್ನಬಸಪ್ಪ (ಚೆನ್ನಿ)
ಶಾಸಕರು, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...