Thursday, June 11, 2026
Thursday, June 11, 2026

ಶೀಘ್ರ ಬಾಡಿಗೆ ಕರಾರನ್ನ ನವೀಕರಣಗೊಳಿಸಿ- ಪಿ.ಮಂಜುನಾಥ್

Date:

ಶಿವಮೊಗ್ಗ ನಗರದ ಬಸ್ ನಿಲ್ದಾಣದ ಅವರಣದಲ್ಲಿರುವ ಅಂಗಡಿ ಮಳಿಗೆಗಳ ಬಾಡಿಗೆ ಕರಾರು ನವೀಕರಣಗೊಳಿಸುವಂತೆ ಖಾಸಗಿ ಬಸ್ ನಿಲ್ದಾಣ ಅಂಗಡಿ ವರ್ತಕರ ಸಂಘದ ಅಧ್ಯಕ್ಷರಾದ ಪಿ.ಮಂಜುನಾಥ್ ಒತ್ತಾಯಿಸಿದರು.
ಕರ್ನಾಟಕ ಸರ್ಕಾರದ ಸುತ್ತೋಲೆ ಕ್ರ.ಸಂ/ನಆಈ/೨೨೧/ಜಿ.ಇ.ಎಲ್‌ಎಲ್/2009 ದಿನಾಂಕ:26-10-2009 ರಿತ್ಯ ದಿನಾಂಕ : 06-01-2011 ರ ಗುರುವಾರದಂದು ನಡೆದ ಸಭಾ ನಡವಳಿಯ ಅನುಸಾರ ಪ್ರತಿ 12 ವರ್ಷಗಳ ಅಧಿಗೆ ಪ್ರತಿ ೩ ವರ್ಷಗಳಿಗೊಮ್ಮೆ ಕರಾರು ಪತ್ರ ನವೀಕರಣಗೊಳ್ಳಬೇಕಾಗಿರುತ್ತದೆ. ಆದರೆ ಸುಮಾರು ಎರಡು ವರ್ಷದಿಂದ ಬಾಡಿಗೆ ಕರಾರು ನವೀಕರಣಗೊಳಿಸಿದೆ ಇರುವುದು ನಮಗೆ ತೊಂದ್ರೆಯಾಗುತ್ತಿದೆ ಎಂದು ಆರೋಪಿಸಿದರು.
ಕರಾರು ನವೀಕರಣಗೊಂಡರೇ ಸರ್ಕಾರಿ ಕಛೇರಿಗಳಲ್ಲಿ ಹಣಕಾಸು ಸಂಸ್ಥೆಗಳಲ್ಲಿ/ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ವ್ಯವಹಾರ ಮಾಡಲು ಅನುಕೂಲವಾಗುತ್ತದೆ. ಇಲ್ಲವೆಂದರೇ ಯಾರು ಕೂಡ ನಮ್ಮಲ್ಲಿ ಹಣದ ವ್ಯವಹಾರನ್ನು ಮಾಡುವುದಿಲ್ಲ. ಇದ್ದರಿಂದ ನಮಗೆ ದಿನನಿತ್ಯ ಹಲವಾರು ಸಾಮಾಗ್ರಿಗಳನ್ನು ತಂದು ಹೂಡಿಕೆ ಮಾಡಲು ಅನಾನೂಕೂಲವಾಗುತ್ತದೆ ಎಂದರು.
ಶೀಘ್ರದಲ್ಲಿ ಕರಾರನ್ನು ನವೀಕರಣಗೊಳಿಸಿ ನಮ್ಮ ವ್ಯಾಪಾರ ವಹಿವಾಟಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಯುಕ್ತರಿಗೆ ಒಂದು ತಿಂಗಳ ಹಿಂದೆಯೇ ಮನವಿ ಸಲ್ಲಿಸಲಾಗಿದೆ. ಆದರೇ ಆಯುಕ್ತರು ಏಕೋ ಈ ಮಳಿಗೆ ಕರಾರು ನವೀಕರಣಗೊಳಿಸಲು ಅಸಡ್ಡೆ ತೋರುತ್ತಿದ್ದಾರೆಂದು ಆರೋಪಿಸಿದರು.
ಮಳಿಗೆ ಕರಾರು ನವೀಕರಣಗೊಂಡರೇ ಸುಮಾರು 15% ಹೆಚ್ಚಳ ಬಾಡಿಗೆ ದೊರೆಯುತ್ತದೆ. ಇದ್ದರಿಂದ ಪಾಲಿಕೆಗೆ ಹೆಚ್ಚಿನ ಅದಾಯ ಕೂಡ ಕ್ರೂಡೀಕರಣವಾಗಲಿದೆ, ಇಷ್ಟೆಲ್ಲ ಅನುಕೂಲವಿದ್ದರೂ ಕೂಡ ಕರಾರು ನವೀಕರಣಗೊಳಿಸಲು ಮೀನಾಮೇಷ ಏಣಿಸುತ್ತಿರುವುದು ಶೋಚನಿಯ ಸಂಗತಿಯಾಗಿದೆ ಎಂದರು.
ಶೀಘ್ರದಲ್ಲಿ ಕರಾರು ನವೀಕರಣಗೊಳಿಸದಿದ್ದರೇ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡುವುದಾಗಿ ಖಾಸಗಿ ಬಸ್ ನಿಲ್ದಾಣ ಅಂಗಡಿ ವರ್ತಕರ ಸಂಘ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಒಮ್ಮತ ತೀರ್ಮಾನ ಕೈಗೊಳ್ಳಲಾಗಿದ್ದು. ಆಯುಕ್ತರು ವರ್ತಕರ ಸಂಕಷ್ಟ ಅರಿತು. ಕರಾರನ್ನು ನವೀಕರಣಗೊಳಿಸಿ ಕೊಟ್ಟು. ನಮ್ಮ ವ್ಯವಹಾರಕ್ಕೆ ಸಹಕರಿಸಬೇಕು ಎಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shimoga ರೋಟರಿ ನಿರಂತರವಾಗಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸೇವಾನಿರತ- ಕಿಶೋರ್ ಕುಮಾರ್

Rotary Shimoga ರೋಟರಿ ಸದಸ್ಯರು ಜನ್ಮದಿನದಂದು ವಿಶೇಷ ಸಮಾಜಮುಖಿ ಚಟುವಟಿಕೆಗಳನ್ನು ಆಯೋಜಿಸಿ...

Department of Posts ಜೂನ್ 23. ಶಿವಮೊಗ್ಗದಲ್ಲಿ ತ್ರೈಮಾಸಿಕ ” ಡಾಕ್ ಅದಾಲತ್ “

Department of Posts ಶಿವಮೊಗ್ಗ ಕೋಟೆ ರಸ್ತೆ ಅಂಚೆ ಇಲಾಖೆಯ ಅಂಚೆ...

Shivamogga Municipal Corporation ಅತಿವೃಷ್ಠಿ ತುರ್ತು ನಿರ್ವಹಣೆಗೆ ನಗರಪಾಲಿಕೆಯಿಂದ ಜನರ ಉಪಯೋಗಕ್ಕೆ ಸಹಾಯವಾಣಿ ಸೌಲಭ್ಯ.

Shivamogga Municipal Corporation ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾಗುವ ಸೂಕ್ಷ್ಮ...