Sunday, December 7, 2025
Sunday, December 7, 2025

CM Siddharamaiah ಹಾಲಿನ ದರ ಏರಿಕೆ‌ ಚರ್ಚೆ, ಹೆಚ್ಚಳದ ಹಣ ಸಂಪೂರ್ಣ ರೈತರಿಗೇ ಸೇರಬೇಕು- ಸಿದ್ಧರಾಮಯ್ಯ

Date:

CM Siddharamaiah ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದರು. ಒಕ್ಕೂಟದ ಬೇಡಿಕೆಗಳನ್ನು ಆಲಿಸಿ, ಹಾಲಿನ ಬೆಲೆಯೇರಿಕೆಯ ಸಂಬಂಧ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹಿಸಲಾಗಿದೆ. ದರ ಏರಿಕೆ ಮಾಡಬೇಕು ಎಂಬ ಒತ್ತಾಯವಿದೆ ಆದರೆ ದರ ಹೆಚ್ಚಳ ಮಾಡಿದರೆ ಮೊತ್ತವು ಸಂಪೂರ್ಣವಾಗಿ ರೈತರಿಗೆ ಮಾತ್ರವೇ ವರ್ಗಾವಣೆಯಾಗಬೇಕು ಎಂಬುದು ಸರ್ಕಾರದ ದೃಢ ನಿಲುವು ಎಂದು ಸ್ಪಷ್ಟಪಡಿಸಿದರು.

ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ.

ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು 2.5% ಕಡ್ಡಾಯವಾಗಿ ಇಳಿಸಬೇಕು. ಅಲ್ಲಿಂದ ಮುಂದಿನ ಮೂರು ತಿಂಗಳ ಒಳಗಾಗಿ ಎಲ್ಲಾ ಒಕ್ಕೂಟಗಳು ಆಡಳಿತಾತ್ಮಕ ವೆಚ್ಚವನ್ನು ಶೇ.2ಕ್ಕಿಂತ ಕೆಳಗೆ ಇಳಿಸಲೇಬೇಕು.

CM Siddharamaiah ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆಯಿದೆ ಎನ್ನುವುದು ನಿಜ. ಹಾಲಿನ ದರ ಹೆಚ್ಚಳ ಮಾಡಿದರೆ ಉತ್ಪಾದನೆ ಹೆಚ್ಚಾಗುತ್ತದೆ. ಇದರ ಲಾಭ ಪೂರ್ಣವಾಗಿ ರೈತರಿಗೆ ತಲುಪಬೇಕು ಎಂಬುವುದು ನಮ್ಮ ಸರ್ಕಾರದ ನಿಲುವಾಗಿದೆ ಎಂದು ಸಭೆಯಲ್ಲಿ ತಿಳಿಸಿರುವುದಾಗಿ ಮುಖ್ಯಮಂತ್ರಿಗಳು ತಮ್ಮ x ಖಾತೆಯಲ್ಲಿ
ಮಾಹಿಯಿ ಹಂಚಿಕೊಂಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...