Thursday, June 11, 2026
Thursday, June 11, 2026

CM Siddharamaiah ಹಾಲಿನ ದರ ಏರಿಕೆ‌ ಚರ್ಚೆ, ಹೆಚ್ಚಳದ ಹಣ ಸಂಪೂರ್ಣ ರೈತರಿಗೇ ಸೇರಬೇಕು- ಸಿದ್ಧರಾಮಯ್ಯ

Date:

CM Siddharamaiah ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದರು. ಒಕ್ಕೂಟದ ಬೇಡಿಕೆಗಳನ್ನು ಆಲಿಸಿ, ಹಾಲಿನ ಬೆಲೆಯೇರಿಕೆಯ ಸಂಬಂಧ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹಿಸಲಾಗಿದೆ. ದರ ಏರಿಕೆ ಮಾಡಬೇಕು ಎಂಬ ಒತ್ತಾಯವಿದೆ ಆದರೆ ದರ ಹೆಚ್ಚಳ ಮಾಡಿದರೆ ಮೊತ್ತವು ಸಂಪೂರ್ಣವಾಗಿ ರೈತರಿಗೆ ಮಾತ್ರವೇ ವರ್ಗಾವಣೆಯಾಗಬೇಕು ಎಂಬುದು ಸರ್ಕಾರದ ದೃಢ ನಿಲುವು ಎಂದು ಸ್ಪಷ್ಟಪಡಿಸಿದರು.

ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ.

ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು 2.5% ಕಡ್ಡಾಯವಾಗಿ ಇಳಿಸಬೇಕು. ಅಲ್ಲಿಂದ ಮುಂದಿನ ಮೂರು ತಿಂಗಳ ಒಳಗಾಗಿ ಎಲ್ಲಾ ಒಕ್ಕೂಟಗಳು ಆಡಳಿತಾತ್ಮಕ ವೆಚ್ಚವನ್ನು ಶೇ.2ಕ್ಕಿಂತ ಕೆಳಗೆ ಇಳಿಸಲೇಬೇಕು.

CM Siddharamaiah ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆಯಿದೆ ಎನ್ನುವುದು ನಿಜ. ಹಾಲಿನ ದರ ಹೆಚ್ಚಳ ಮಾಡಿದರೆ ಉತ್ಪಾದನೆ ಹೆಚ್ಚಾಗುತ್ತದೆ. ಇದರ ಲಾಭ ಪೂರ್ಣವಾಗಿ ರೈತರಿಗೆ ತಲುಪಬೇಕು ಎಂಬುವುದು ನಮ್ಮ ಸರ್ಕಾರದ ನಿಲುವಾಗಿದೆ ಎಂದು ಸಭೆಯಲ್ಲಿ ತಿಳಿಸಿರುವುದಾಗಿ ಮುಖ್ಯಮಂತ್ರಿಗಳು ತಮ್ಮ x ಖಾತೆಯಲ್ಲಿ
ಮಾಹಿಯಿ ಹಂಚಿಕೊಂಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shimoga ರೋಟರಿ ನಿರಂತರವಾಗಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸೇವಾನಿರತ- ಕಿಶೋರ್ ಕುಮಾರ್

Rotary Shimoga ರೋಟರಿ ಸದಸ್ಯರು ಜನ್ಮದಿನದಂದು ವಿಶೇಷ ಸಮಾಜಮುಖಿ ಚಟುವಟಿಕೆಗಳನ್ನು ಆಯೋಜಿಸಿ...

Department of Posts ಜೂನ್ 23. ಶಿವಮೊಗ್ಗದಲ್ಲಿ ತ್ರೈಮಾಸಿಕ ” ಡಾಕ್ ಅದಾಲತ್ “

Department of Posts ಶಿವಮೊಗ್ಗ ಕೋಟೆ ರಸ್ತೆ ಅಂಚೆ ಇಲಾಖೆಯ ಅಂಚೆ...

Shivamogga Municipal Corporation ಅತಿವೃಷ್ಠಿ ತುರ್ತು ನಿರ್ವಹಣೆಗೆ ನಗರಪಾಲಿಕೆಯಿಂದ ಜನರ ಉಪಯೋಗಕ್ಕೆ ಸಹಾಯವಾಣಿ ಸೌಲಭ್ಯ.

Shivamogga Municipal Corporation ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾಗುವ ಸೂಕ್ಷ್ಮ...