Monday, December 15, 2025
Monday, December 15, 2025

International Women’s Day ಕವನಗಳು ಸರಳ,ಸಹಜ ಮತ್ತು ಪ್ರಾಸಬದ್ಧವಾಗಿರ ಬೇಕು- ವಿಜಯಾಶ್ರೀಧರ್

Date:

International Women’s Day ಶಿವಮೊಗ್ಗ ಜಿಲ್ಲಾ ಲೇಖಕಿಯರು ಹಾಗೂ ವಾಚಕಿಯರ ಸಂಘದ ವತಿಯಿಂದ ವಿಶ್ವಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಈ ವೇಳೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀಮತಿ ವಿಜಯಾ ಶ್ರೀಧರ್ ಮಾತನಾಡಿದ, ಹೆಸರಾಂತ ಕವಿಗಳಾದ ದ.ರಾ.ಬೇಂದ್ರೆ, ಕುವೆಂಪು, ಜಿ.ಎಸ್.ಶಿವರುದ್ರಪ್ಪ, ನಿಸಾರ್ ಅಹಮದ್ ರವರ ಕವನಗಳ ವೈಶಿಷ್ಟ್ಯತೆಯನ್ನು ಉದಾಹರಿಸುತ್ತಾ, ಕವನಗಳು ಸರಳ, ಸಹಜ ಹಾಗೂ ಪ್ರಾಸಬದ್ಧವಾಗಿರಬೇಕೆಂದು ಕವನ ರಚನೆಯ ಕುರಿತಾಗಿ ತಿಳಿಸಿದರು.

ಗೌರವಾಧ್ಯಕ್ಷೆ ಚಂದ್ರಕಲಾ ಮಾತನಾಡಿ, ತಮಗೆ ಬಾಲ್ಯದಿಂದಲೇ ಕವನ ರಚನೆಯ ಬಗೆಗೆ ಒಲವಿತ್ತು ಎಂದು ತಮ್ಮ ಬಾಲ್ಯದ ಕವನ ರಚನೆಯಲ್ಲಿನ ಆಸಕ್ತಿ ಬಗ್ಗೆ ತಿಳಿಸಿ, ಬಾಲ್ಯದಲ್ಲಿ ಅವರು ಬರೆದ ಸುಂದರ ಕವಿತೆಯೊಂದರ ಕುರಿತು ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಆಗನಿಸಿದ್ದ ಸುನೀತಾ ರಾವ್ ಮಾತನಾಡಿ, ಮಹಿಳಾ ದಿನಾಚರಣೆ ಪ್ರಾರಂಭವಾದದುದರ ಕುರಿತು ಮಾಹಿತಿ ನೀಡಿದರು. ಹಾಗೂ ಎಲ್ಲಿ ಮಹಿಳಾ ಶೋಷಣೆಯಾದರೂ ಅಲ್ಲಿ ಮಹಿಳೆಯರು ಸಂಘಟಿತರಾಗಬೇಕೆಂಬ ಕಳಕಳಿ ವ್ಯಕ್ತಪಡಿಸಿದರು.

International Women’s Day ಕವಿಗೋಷ್ಠಿಯಲ್ಲಿ ಪ್ರಮುಖರಾದ ಗುಣ.ಎಸ್, ಇಂದಿರಾ, ಗಾಯತ್ರಿ ರಮೇಶ್, ಡಿ.ಬಿ.ನಾಗರತ್ನಮ್ಮ, ನಾಗರತ್ನಮ್ಮ ಸುಬ್ರಮಣ್ಯ, ಸು. ವಿಜಯಲಕ್ಷ್ಮೀ, ಉಷಾ ನಾಗರಾಜ್, ಜಯಲಕ್ಷ್ಮೀ ಚಂದ್ರಹಾಸ, ಸ್ಮಿತಾ ನಂದೀಶ್, ಜಯಶ್ರೀ ಗಣೇಶ್, ವಿಜಯಲಕ್ಷ್ಮೀ ಪಂಡಿತ್, ತಾರಾ ಪ್ರಸಾದ್, ಮಂಜುಳಾ ಉಮೇಶ್, ಹೇಮಾ, ಆಶಾಲತಾ, ದೇವಿ ನಾಗರತ್ನಮ್ಮ, ಕುಮುದಾ ಸುಶೀಲ್, ರಮಾಶಾಸ್ತ್ರಿ, ಸುಮಾ ಮಂಜುನಾಥ್, ರುಕ್ಮಿಣಿ ಆನಂದ್, ಸ್ತ್ರೀ ಸಂವೇದನೆಯ ಕುರಿತಾಗಿ ಕವನಗಳನ್ನು ವಾಚಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಕಾತ್ಯಾಯಿನಿ.ಸಿ.ಎಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯದರ್ಶಿ ಮಾಲಾ ರಾಮಚಂದ್ರ ಎಲ್ಲರನ್ನೂ ಸ್ವಾಗತಿಸಿ, ಶ್ರೀರಂಜಿನಿ ದತ್ತಾತ್ರಿ ಕಾರ್ಯಕ್ರಮ ನಿರೂಪಿಸಿ, ರುಕ್ಮಿಣಿ ಆನಂದ್ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...