Friday, June 12, 2026
Friday, June 12, 2026

Kimmane Ratnakar ಬಿಜೆಪಿಯವರು ಕ್ರಿಶ್ಚಿಯನ್ ಮುಸ್ಲೀಂ ವಿರುದ್ಧ ಮಾತಾಡುವುದು ಬಿಟ್ಟು ಹಿಂದೂ ಸಮಾಜದಲ್ಲಿನ ಅಸಮಾನತೆ ಬಗ್ಗೆ ಮಾತಾಡಿಲ್ಲ-ಕಿಮ್ಮನೆ ರತ್ನಾಕರ್

Date:

Kimmane Ratnakar ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಸಂವಿಧಾನ ಬದಲಾವಣೆಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ವಿರುದ್ಧ ಶಾಸಕ ಆರಗ ಜ್ಞಾನೇಂದ್ರ ನಡೆಸಿರುವ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿದರು.

ಸಂವಿಧಾನದ ಮೂಲ ಸ್ವರೂಪ ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ಪರಿಸ್ಥಿತಿಗೆ ಅನುಗುಣವಾಗಿ ಕೆಲವೊಂದು ಬದಲಾವಣೆ ಮಾಡಬಹುದು ಅಷ್ಟೇ.
ಆದರೆ ಆರ್ ಎಸ್ ಎಸ್ ನ ಮೂಲ ಕೃತಿಯಾದ ಚಿಂತನ ಗಂಗಾ ಎಂಬ ಪುಸ್ತಕದಲ್ಲೇ ಈ ಪ್ರಸ್ತಾಪ ಇದೆ ಎಂದರು.

1962 ರಲ್ಲಿ ಹೊರ ತಂದ ಕೃತಿಯಲ್ಲಿ ಸಂವಿಧಾನ ಬದಲಾವಣೆ ಪೂರ್ಣವಾಗಿ ಬದಲಾಗಬೇಕು ಎಂದಿದೆ.
ಹಾಗೆ ನೋಡಿದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ಮೋದಿ ಉತ್ತರ ನೀಡಬೇಕು.ಒಂದು ದೇಶ, ಒಂದು ಭಾಷೆ ಹಾಗೂ ಒಂದು ಸಂವಿಧಾನ‌ ಆರ್ಎಸ್ಎಸ್ ಉದ್ದೇಶವೆಂದರು.

Kimmane Ratnakar ಹಾಗಾದರೆ ಬೇರೆ ಬೇರೆ ಭಾಷೆ ಮಾತನಾಡುವ ಇತರ ರಾಜ್ಯಗಳ ಪರಿಸ್ಥಿತಿ ಏನಾಗಬೇಕು.1925 ರಿಂದ ಈ ತನಕದ ಸಂಘಟನೆಗಳು ದೇಶದ ಅಸಮಾನತೆ ವಿರುದ್ಧ ಹೋರಾಡಿದ ಒಂದೇ ಒಂದು ನಿದರ್ಶನ ಇಲ್ಲ.ಬಿಜೆಪಿಯವರು ಕ್ರಿಶ್ಚಿಯನ್-ಮುಸ್ಲಿಂ‌ ವಿರುದ್ಧ ಮಾತನಾಡುವುದು ಬಿಟ್ಟು ಹಿಂದೂ ಸಮಾಜದ ಅಸಮಾನತೆ ಬಗ್ಗೆ ಎಂದೂ ಮಾತನಾಡಿಲ್ಲ.
ಅದರ ಬದಲಿಗೆ ದೇಶದ ಜನರನ್ನು
ಧರ್ಮದ ಹೆಸರಿನಲ್ಲಿ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Election Commission of India ಬೆಂಗಳೂರಿನಲ್ಲಿ “ತಂತ್ರಜ್ಞಾನ ಚಾಲಿತ ಮತದಾರರ ನೋಂದಣಿ ” ಒಂದು ದಿನದ ಕಾರ್ಯಾಗಾರ

Election Commission of India ಭಾರತದ ಚುನಾವಣಾ ಆಯೋಗವು, ಭಾರತೀಯ ಅಂತರಾಷ್ಟ್ರೀಯ...

National Vaccination Day ಜೂನ್ 28, ಭಾನುವಾರ “ರಾಷ್ಟ್ರೀಯ ಲಸಿಕಾ ದಿನ”-ರಿತ್ವಿಕ್ ಪಾಂಡೆ

National Vaccination Day ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ...

B.Y. Raghavendra ಸಂಸದ ರಾಘವೇಂದ್ರರಿಂದ ಮಾಚೇನಹಳ್ಳಿ ಕೈಗಾರಿಕಾ ಘಟಕಗಳಿಗೆ ಭೇಟಿ

B.Y. Raghavendra ಶಿವಮೊಗ್ಗದ ಕೈಗಾರಿಕಾ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿರುವ...

S.N. Channabasappa ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಸುಸಜ್ಜಿತ ರಸ್ತೆ ಸಂಪರ್ಕ, ಸಂಚಾರ ಸುಗಮ ಅವಕಾಶಕ್ಕೆ ಆದ್ಯತೆ- ಶಾಸಕ ಚೆನ್ನಿ

S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಸುಸಜ್ಜಿತ ರಸ್ತೆ ಸಂಪರ್ಕ...