Monday, May 4, 2026
Monday, May 4, 2026

Dr. Sharan Prakash Patil ದೂರದಿಂದ ಬಂದ ಹಿಂದುಳಿದ ವರ್ಗಗಳ ರೋಗಿಗಳಿಗೆ ಆರ್ಥಿಕ ಹೊರೆ ಹಾಕದೇ ಒಳರೋಗಿಗಳಾಗಿ ಸೇರಿಸಿಕೊಳ್ಳಿ- ಡಾ.ಶರಣ ಪ್ರಕಾಶ ಪಾಟೀಲ್

Date:

Dr. Sharan Prakash Patil ಬೆಂಗಳೂರಿನ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಗೆ ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಭೇಟಿ‌ ನೀಡಿ, ಅಲ್ಲಿನ ಒಳರೋಗಿಗಳ ಯೋಗಕ್ಷೇಮವನ್ನು ವಿಚಾರಿಸಿದರು.

ಇದೇ ಸಂದರ್ಭದಲ್ಲಿ ದೂರದೂರಿನಿಂದ ಬಂದ, ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಹಾಕದೇ, ಅವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಬೇಕು ಎಂದು ಕಿದ್ವಾಯಿ ಆಡಳಿತ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.

ಸಂಸ್ಥೆಯ ಆಡಳಿತ ಮಂಡಳಿಯ ಜೊತೆ ಸಭೆ‌ ನಡೆಸಿ
ರೋಗಿಗಳಿಗೆ ಹೆಚ್ಚಿನ ಆರ್ಥಿಕ ಹೊರೆಯಾಗದಂತೆ ನಿಗಾವಹಿಸಿ, ದೂರದ ಊರಿಗಳಿಂದ ಬಂದ ರೋಗಗಳ ಬಗ್ಗೆ ಹೆಚ್ಚಿನ ಗಮನ ನೀಡಿ ಎಂದು ತಿಳಿಸಿದರು

ಅಂತಿಮ ಆರೋಗ್ಯದ ವರದಿಗಳನ್ನು ನೀಡಲು ಒಂದೆರಡು ದಿನಗಳು ತೆಗೆದುಕೊಳ್ಳಬಹುದು, ಈ ಅವಧಿಯಲ್ಲಿ ಒಳರೋಗಿಗಳಾಗಿ ದಾಖಲಾಗಲು ಬಯಸುವವರಿಗೆ ಒಪ್ಪಿಗೆ ಪತ್ರವನ್ನು ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು

Dr. Sharan Prakash Patil ಕಿದ್ವಾಯಿ ಆಸ್ಪತ್ರೆಗೆ ಬರುವ ಶೇ. 90ಕ್ಕಿಂತ ಹೆಚ್ಚು ರೋಗಿಗಳು ಬಿಪಿಎಲ್ ವರ್ಗವಾಗಿರುವುದರಿಂದ, ವಿಶೇಷ ವಾರ್ಡ್, ಶಾಂತಿಧಾಮ ಮತ್ತು ಅನಿಕೇತನ, ಅರೆ-ವಿಶೇಷ ವಾರ್ಡನ್ನು ಸಾಮಾನ್ಯ ವಾರ್ಡ್‌ ಗಳಾಗಿ ಪರಿವರ್ತಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕಿದ್ವಾಯಿ ಆಡಳಿತಾಧಿಕಾರಿ ವೈ.ನವೀನ್ ಭಟ್ ಮತ್ತು ನಿರ್ದೇಶಕ ಡಾ.ನವೀನ್ ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...