Sunday, December 14, 2025
Sunday, December 14, 2025

Shimoga News ಅಧ್ಯಾಪಕರು ಹೊಸ ಬದಲಾವಣೆಗಳನ್ನ ಮುಕ್ತವಾಗಿ ಸ್ವೀಕರಿಸಬೇಕು- ಡಾ.ಕೆ.ವಿಕ್ರಮ್

Date:

Shimoga News ಅಧ್ಯಾಪಕರು ಹೊಸ ಬದಲಾವಣೆಗಳನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಬೇಕು. ಇಂದಿನ ತಾಂತ್ರಿಕ ಯುಗದಲ್ಲಿ ಹೊಸ ಹೊಸ ಅನ್ವೇಷಣೆಗಳು ನಡೆಯುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಿ ತರಗತಿ ರಹಿತ ವ್ಯಾಸಂಗ ಮುಂದುವರಿಯಬಹುದು ಕಾಲೇಜು ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಆಂತರಿಕ ಗುಣಮಟ್ಟಕೋಶದ ನೋಡಲ್ ಅಧಿಕಾರಿ ಡಾ. ವಿಕ್ರಮ್ ಕೆ ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಐಕ್ಯೂಎಸಿ ವಿಭಾಗ, ಕಾಲೇಜು ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಆಂತರಿಕ ಗುಣಮಟ್ಟ ಕೋಶ ವಿಭಾಗದ ಆಶ್ರಯದಲ್ಲಿ ಇತ್ತೀಚಿನ ಬದಲಾವಣೆಗಳು ಮತ್ತು ಹೊಸ ವಿನ್ಯಾಸಗಳ ಕುರಿತು ಆಯೋಜಿಸಿದ್ದ ಒಂದು ವಿಶೇಷ ಕಾರ್ಯಗಾರದಲ್ಲಿ ಮಾತನಾಡಿದರು.
ಆನ್ ಲೈನ್ ಮೂಲಕವೇ ಎಲ್ಲ ರೀತಿಯ ಮೌಲ್ಯಮಾಪನಗಳು ಸಾಧ್ಯವಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಪ್ರತಿಯೊಂದನ್ನು ತಿರಸ್ಕರಿಸುವ ಮನೋಭಾವನೆಯನ್ನು ಬಿಟ್ಟು ಹೆದರಿಕೆಯಿಂದ ಹೊರಬಂದು ಹೊಸ ವಿಷಯಗಳಿಗೆ ಮನಸ್ಸುಗಳನ್ನು ಸಿದ್ಧಪಡಿಸಿಕೊಳ್ಳುವುದು ಉತ್ತಮ ಎಂದು ತಿಳಿಸಿದರು.
ಕಾರ್ಯಗಾರವನ್ನು ಉದ್ಘಾಟಿಸಿದ ಕುವೆಂಪು ವಿಶ್ವವಿದ್ಯಾನಿಲಯದ
Shimoga News ಐ ಕ್ಯೂ ಎಂ ಸಿ ನಿರ್ದೇಶಕ ಡಾ. ಸೈಯದ್ ಅಶ್ವಕ್ ಅಹಮದ್ ಮಾತನಾಡಿ, ಬದಲಾವಣೆ ಜಗದ ನಿಯಮ. ಈ ಬದಲಾವಣೆಗಳನ್ನು ಎಲ್ಲರೂ ಸಮ್ಮತಿಸಿ ವಿದ್ಯಾರ್ಥಿ ಸ್ನೇಹಿ ವಿಚಾರಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಡಿವಿಎಸ್ ಆಡಳಿತ ಸಮಿತಿಯ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಮಾತನಾಡಿ, ಅಧ್ಯಾಪಕರಲ್ಲಿ ಇತ್ತೀಚಿನ ದಿನಗಳಲ್ಲಿ ಹೊಸ ವಿನ್ಯಾಸಗಳನ್ನು ಅಳವಡಿಸಿಕೊಳ್ಳುವ ಮನಸ್ಥಿತಿ ಕಡಿಮೆ ಇದೆ. ಅಧ್ಯಾಪಕರು ಹೊಸ ವಿಷಯಗಳ ಕಲಿಕೆಯಲ್ಲಿ ಆಸಕ್ತಿ ತೋರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ನಾಲ್ಕು ಜಿಲ್ಲೆಗಳ ವ್ಯಾಪ್ತಿಯ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳು ಪ್ರಾಂಶುಪಾಲರು ಭಾಗವಹಿಸಿದ್ದರು
ಡಿವಿಎಸ್ ಆಡಳಿತ ಸಮಿತಿಯ ಕಾರ್ಯದರ್ಶಿ ಎಸ್.ರಾಜಶೇಖರ್, ಕೋಶಾಧ್ಯಕ್ಷ
ಬಿ .ಗೋಪಿನಾಥ್, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಎಂ ವೆಂಕಟೇಶ್ , ಐ ಕ್ಯೂ ಎ ಸಿ ಕೋ ಆರ್ಡಿನೇಟರ್ ಪ್ರೊ ಕುಮಾರಸ್ವಾಮಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...