Thursday, July 9, 2026
Thursday, July 9, 2026

B.Y. Vijayendra ಸುರಿಯುವ ಮಳೆಯಲ್ಲೂ ತಣ್ಣಗಾಗದ ಬಿಜೆಪಿ ಜನಾಕ್ರೋಶ. ಕಾಂಗ್ರೆಸ್ ಪಕ್ಷಕ್ಕೆ ಮಾತಿನ ಬಿಸಿ ಮುಟ್ಟಿಸಿದ ಬಿ.ವೈ ವಿಜಯೇಂದ್ರ

Date:

B.Y. Vijayendra “ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಳೆಗೂ ಜಗ್ಗದೇ ನಡೆದ ಜನಾಕ್ರೋಶ ಯಾತ್ರೆ”

ಶಿವಮೊಗ್ಗದಲ್ಲಿ ಶನಿವಾರ ರಾಜ್ಯದ ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲಾಯಿತು.
ಬೆಲೆ ಏರಿಕೆಯ ಮೂಲಕ ನಿತ್ಯವೂ ಜನಸಾಮಾನ್ಯರ ಜೇಬಿಗೆ ಕತ್ತರಿ ಪ್ರಯೋಗ ಮಾಡುತ್ತಿರುವ ನಿರ್ಧಾರಗಳು, ಅಭಿವೃದ್ಧಿ ಶೂನ್ಯ ಆಡಳಿತ, ಭ್ರಷ್ಟಾಚಾರ ಹಾಗೂ ಓಲೈಕೆ ರಾಜಕಾರಣಕ್ಕಾಗಿ ಸಮಸ್ತ ಹಿಂದೂಗಳಿಗೆ ದ್ರೋಹ ಬಗೆಯುತ್ತಿರುವ ಕಾಂಗ್ರೆಸ್ ಸರ್ಕಾರದ ನಿಲುವುಗಳನ್ನು ಖಂಡಿಸಿ ರಾಜ್ಯದ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದರು.

ಸುರಿಯುವ ಮಳೆಯ ನಡುವೆಯೂ ಸಾರ್ವಜನಿಕರು ಹಾಗೂ ಕಾರ್ಯಕರ್ತರು ತೋರಿದ ಆಕ್ರೋಶ ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಿಸಲೇಬೇಕೆಂಬ ಸಂಕಲ್ಪವನ್ನು ಸಾಕ್ಷೀಕರಿಸಿತು.

B.Y. Vijayendra ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಸಂಸದರಾದ ಶ್ರೀ ಗೋವಿಂದ ಕಾರಜೋಳ, ಸಂಸದರಾದ ಶ್ರೀ ಕೋಟಾ ಶ್ರನಿವಾಸ ಪೂಜಾರಿ, ಶ್ರೀ ಬಿ.ವೈ.ರಾಘವೇಂದ್ರ,ಮಾಜಿ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ, ಶಾಸಕರಾದ ಶ್ರೀ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಭಾರತಿ ಶೆಟ್ಟಿ,ರಾಜ್ಯ ಉಪಾಧ್ಯಕ್ಷರಾದ ಶ್ರೀ ಹರತಾಳು ಹಾಲಪ್ಪ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರಾದ ಕು.ಸಿ.ಮಂಜುಳಾ, ಮಾಜಿ ಶಾಸಕರಾದ ಶ್ರೀ ಅಶೋಕ್ ನಾಯಕ್, ಶ್ರೀ ಎಂ.ಡಿ.ಲಕ್ಷ್ಮೀನಾರಾಯಣ್, ವಿವಿಧ ಪ್ರಕೋಷ್ಠಕಗಳ ರಾಜ್ಯ ಸಂಚಾಲಕರಾದ ಶ್ರೀ ದತ್ತಾತ್ರಿ, ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್, ಸೇರಿದಂತೆ ರಾಜ್ಯ ಪದಾಧಿಕಾರಿಗಳು, ಪ್ರಮುಖರು ಮತ್ತು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...