Thursday, July 9, 2026
Thursday, July 9, 2026

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

Date:

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ದತ್ತಿ ದಾನಿಗಳಾದ ಶ್ರೀಮತಿ ಮಾನಸ ಶಿವರಾಮಕೃಷ್ಣರವರು ತಮ್ಮ ತಂದೆ ತಾಯಿಗಳಾದ ಶ್ರೀ ವಿ. ಎಚ್. ನಾಗೇಂದ್ರಜೋಯಿಸ್ ಮತ್ತು ಶ್ರೀಮತಿ ನಾಗರತ್ನಮ್ಮ ಎನ್. ಜೋಯಿಸ್ ಇವರ ಸ್ಮರಣಾರ್ಥ “ಪ್ರಬಂಧ”ಕುರಿತಾದ ದತ್ತಿ ಕಾರ್ಯಕ್ರಮ ನಡೆಸಿಕೊಟ್ಟರು. ಕು. ವಿಧಾತ್ರಿಯ ಪ್ರಾರ್ಥನೆಯೊಂದಿಗೆ ಆರಂಭವಾದ ಈ ಕಾರ್ಯಕ್ರಮಕ್ಕೆ ಸಂಘದ ಕಾರ್ಯದರ್ಶಿಗಳಾದ ಶ್ರೀಮತಿ ಮಾಲಾ ರಾಮಚಂದ್ರ ಎಲ್ಲರನ್ನೂ ಸ್ವಾಗತಿಸಿದರು. ಸಂಘದ ಅಧ್ಯಕ್ಷರಾದ ಶ್ರೀಮತಿ ಕಾತ್ಯಾಯಿನಿ ಸಿ. ಎಸ್. ರವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಘದ ಗೌರವಾಧ್ಯಕ್ಷರಾದ ಶ್ರೀಮತಿ ಎಸ್. ವಿ ಚಂದ್ರಕಲಾರವರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಶ್ರೀಮತಿ ಮಾನಸ ಶಿವರಾಮಕೃಷ್ಣರವರು ಉದ್ಘಾಟಿಸಿ, ತಮ್ಮ ತಂದೆ ತಾಯಿಗಳ ಧನಾತ್ಮಕ ಹಾಗೂ ಸಮಾಜಮುಖಿ ಚಿಂತನೆಯ ಅನುಕರಣೀಯ ಗುಣಗಳನ್ನು ಸ್ಮರಿಸಿಕೊಂಡರು. ಶ್ರೀಮತಿ ಲಕ್ಷೀ ಶಾಸ್ತ್ರೀ ಯವರು ಪ್ರಬಂಧ ರಚನೆ -ವಿಸ್ತಾರ ಕುರಿತು ಸೋದಾಹರಣೆಗಳ ಮೂಲಕ ಸವಿಸ್ತಾರವಾಗಿ ವಿವರಿಸಿದರು. ಲೇಖಕಿ ಸು. ವಿಜಯಲಕ್ಷೀ ಯವರು ಸೊಗಸಾದ ಸ್ವರಚಿತ ಪ್ರಬಂಧ ಮಂಡಿಸಿದರು. ಖ್ಯಾತ ಗಾಯಕಿಯರಾದ ಶ್ರೀಮತಿ ವಿಜಯಾ ಕಾಂತೇಶ್, ಸುಜಯಾ ರಾಧಾಕೃಷ್ಣ, ಅಂಬಿಕಾ ದೇವರಾಜ್ ಸುಶ್ರಾವ್ಯವಾಗಿ ಭಾವಗೀತೆಗಳನ್ನು ಹಾಡಿದರು. ಶ್ರೀಮತಿ ಆಶಾಲತಾರವರು ನಿರೂಪಣೆ ಹಾಗೂ ವಂದನಾರ್ಪಣೆ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...