Saturday, December 6, 2025
Saturday, December 6, 2025

S.N.Chennabasappa ಶಿವಮೊಗ್ಗ ಸಹ್ಯಾದ್ರಿ‌ನಗರದಲ್ಲಿ ನೀರಿಗಾಗಿ ಸಾರ್ವಜನಿಕರ ಪ್ರತಿಭಟನೆ, ಶಾಸಕ ‘ಚೆನ್ನಿ’ ಭೇಟಿ ಪರಿಶೀಲನೆ

Date:

S.N.Chennabasappa ಶಿವಮೊಗ್ಗದ ಸಹ್ಯಾದ್ರಿ ನಗರ ಬಡಾವಣೆಗಳಲ್ಲಿ ಕುಡಿಯುವ ನೀರಿನ ಸರಬರಾಜು ಸ್ಥಗಿತಗೊಂಡ ಹಿನ್ನೆಲೆಯಲ್ಲಿ, ಸ್ಥಳೀಯ ನಿವಾಸಿಗಳು ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ತಕ್ಷಣ ಭೇಟಿ ನೀಡಿ, ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿದರು.

ಸ್ಥಳೀಯರ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಕುಡಿಯುವ ನೀರು ಸರಬರಾಜು ಮಂಡಳಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ, ಸಮಸ್ಯೆಯ ಮೂಲ ಕಾರಣವನ್ನು ಗುರುತಿಸಿ, ರಾತ್ರಿ 10 ಗಂಟೆಯಿಂದ ಬಡಾವಣೆಗೆ ನೀರಿನ ಸರಬರಾಜು ಪ್ರಾರಂಭಿಸಲಾಯಿತು.

S.N.Chennabasappa ಸ್ಥಳೀಯರು ಈ ಕ್ರಮಕ್ಕೆ ತೃಪ್ತಿ ವ್ಯಕ್ತಪಡಿಸಿ, ತಮ್ಮ ಧ್ವನಿಗೆ ಸ್ಪಂದನೆ ದೊರೆತಿರುವುದಕ್ಕೆ ಶಾಸಕರಿಗೆ ಕೃತಜ್ಞತೆ ತಿಳಿಸಿದರು. ಮುಂದಿನ ದಿನಗಳಲ್ಲಿ ಇಂತಹ ಸಮಸ್ಯೆಗಳನ್ನು ಪೂರ್ವಭಾವಿಯಾಗಿ ತಡೆಯುವ ನಿಟ್ಟಿನಲ್ಲಿ, ನಿರಂತರ ನಿಗಾವಹಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಶಾಸಕರು ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...