Monday, February 2, 2026
Monday, February 2, 2026

S.N.Chennabasappa ಜನಿವಾರ ತೆಗೆಸಿದ ಪ್ರಕರಣ, ಘಟನೆ‌ಮುಂದೆ ತಪ್ಪಿಸಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಿಪ್ರ ಸಂಘಟನೆಯ ಮನವಿ

Date:

S.N.Chennabasappa ಶಿವಮೊಗ್ಗದ ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶ್ರೀ ವಿಶ್ವಮಧ್ವ ಮಹಾಪರಿಷತ್ (ಶಿವಮೊಗ್ಗ ಶಾಖೆ) ಹಾಗೂ ಶಿವಮೊಗ್ಗ ಜಿಲ್ಲಾ ಸರ್ವ ವಿಪ್ರವೃಂದದ ನೇತೃತ್ವದಲ್ಲಿ ನಡೆದ ಮೌನ ಪ್ರತಿಭಟನೆಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

ಸಿಇಟಿ ಪರೀಕ್ಷೆಯ ವೇಳೆ, ಶಿವಮೊಗ್ಗ, ಬೀದರ್ ಹಾಗೂ ಇತರ ಕೆಲವೊಂದು ಸ್ಥಳಗಳಲ್ಲಿ ಜನಿವಾರವನ್ನು ಬಿಚ್ಚುವ ಘಟನೆಗಳನ್ನು ಗಂಭೀರವಾಗಿ ಖಂಡಿಸಿ, ಹಿಂದೂ ಸಂಸ್ಕೃತಿಗೆ ಹಾಗೂ ವೈದಿಕ ಪರಂಪರೆಗೆ ಅಪಮಾನವಾಗಿರುವುದರಿಂದ, ಇಂತಹ ಘಟನೆಯನ್ನು ತಕ್ಷಣ ನಿಲ್ಲಿಸಿ, ಸಂಬಂಧಿತ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶ್ರೀ ವಿಶ್ವಮಧ್ವ ಮಹಾಪರಿಷತ್ (ಶಿವಮೊಗ್ಗ ಶಾಖೆ) ಹಾಗೂ ಶಿವಮೊಗ್ಗ ಜಿಲ್ಲಾ ಸರ್ವ ವಿಪ್ರವೃಂದದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

S.N.Chennabasappa ಈ ಸಂದರ್ಭದಲ್ಲಿ ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಶ್ರೀ ದತ್ತಾತ್ರಿ, ಮಾಜಿ ಶಾಸಕರಾದ ಶ್ರೀ ಪ್ರಸನ್ನ ಕುಮಾರ್, ಶ್ರೀ ವಿಶ್ವಮಧ್ವ ಮಹಾಪರಿಷತ್ ಶಿವಮೊಗ್ಗ ಶಾಖೆಯ ಪ್ರಮುಖರು, ಜಿಲ್ಲಾ ಸರ್ವ ವಿಪ್ರವೃಂದದ ಪದಾಧಿಕಾರಿಗಳು ಹಾಗೂ ಭಕ್ತ ವೃಂದಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...