Wednesday, December 17, 2025
Wednesday, December 17, 2025

S.N.Chennabasappa ಜನಿವಾರ ತೆಗೆಸಿದ ಪ್ರಕರಣ, ಘಟನೆ‌ಮುಂದೆ ತಪ್ಪಿಸಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಿಪ್ರ ಸಂಘಟನೆಯ ಮನವಿ

Date:

S.N.Chennabasappa ಶಿವಮೊಗ್ಗದ ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶ್ರೀ ವಿಶ್ವಮಧ್ವ ಮಹಾಪರಿಷತ್ (ಶಿವಮೊಗ್ಗ ಶಾಖೆ) ಹಾಗೂ ಶಿವಮೊಗ್ಗ ಜಿಲ್ಲಾ ಸರ್ವ ವಿಪ್ರವೃಂದದ ನೇತೃತ್ವದಲ್ಲಿ ನಡೆದ ಮೌನ ಪ್ರತಿಭಟನೆಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

ಸಿಇಟಿ ಪರೀಕ್ಷೆಯ ವೇಳೆ, ಶಿವಮೊಗ್ಗ, ಬೀದರ್ ಹಾಗೂ ಇತರ ಕೆಲವೊಂದು ಸ್ಥಳಗಳಲ್ಲಿ ಜನಿವಾರವನ್ನು ಬಿಚ್ಚುವ ಘಟನೆಗಳನ್ನು ಗಂಭೀರವಾಗಿ ಖಂಡಿಸಿ, ಹಿಂದೂ ಸಂಸ್ಕೃತಿಗೆ ಹಾಗೂ ವೈದಿಕ ಪರಂಪರೆಗೆ ಅಪಮಾನವಾಗಿರುವುದರಿಂದ, ಇಂತಹ ಘಟನೆಯನ್ನು ತಕ್ಷಣ ನಿಲ್ಲಿಸಿ, ಸಂಬಂಧಿತ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶ್ರೀ ವಿಶ್ವಮಧ್ವ ಮಹಾಪರಿಷತ್ (ಶಿವಮೊಗ್ಗ ಶಾಖೆ) ಹಾಗೂ ಶಿವಮೊಗ್ಗ ಜಿಲ್ಲಾ ಸರ್ವ ವಿಪ್ರವೃಂದದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

S.N.Chennabasappa ಈ ಸಂದರ್ಭದಲ್ಲಿ ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಶ್ರೀ ದತ್ತಾತ್ರಿ, ಮಾಜಿ ಶಾಸಕರಾದ ಶ್ರೀ ಪ್ರಸನ್ನ ಕುಮಾರ್, ಶ್ರೀ ವಿಶ್ವಮಧ್ವ ಮಹಾಪರಿಷತ್ ಶಿವಮೊಗ್ಗ ಶಾಖೆಯ ಪ್ರಮುಖರು, ಜಿಲ್ಲಾ ಸರ್ವ ವಿಪ್ರವೃಂದದ ಪದಾಧಿಕಾರಿಗಳು ಹಾಗೂ ಭಕ್ತ ವೃಂದಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...

Klive Special Article ಗೀತ ನೃತ್ಯಗಳ ಮೂಲಕ ಮನಸೆಳೆದ ಶ್ರೀಶಾರದಾ ಸಂಗೀತ- ನೃತ್ಯ ವಿದ್ಯಾಲಯದ ರಂಗ ಪ್ರಸ್ತುತಿ

Klive Special Article ವಿಜಯವಾಣಿ ಪತ್ರಿಕೆಯ ರವಿಕಾಂತ್ ಕುಂದಾಪುರ ವಾಟ್ಸಾಪ್ ಡೀಪಿಯಲ್ಲಿ...