Thursday, March 26, 2026
Thursday, March 26, 2026

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Date:

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ ತುಂಬಾ ಶ್ರೇಷ್ಠವಾದ ದಾನ. ರಕ್ತದಾನಕ್ಕಿಂತ ಅನ್ಯದಾನ ಬೇರೊಂದಿಲ್ಲ. ರಕ್ತದಾನದಿಂದ ಸದಾ ಲವವಲವಿಕೆಯಿಂದ ಇರುವುದರ ಜೊತೆಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್ ಕರೆ ನೀಡಿದರು.

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಸಭಾಂಗಣದಲ್ಲಿ ಡಾಕ್ಟರ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ರಕ್ತದಾನದಿಂದ ಶೇ.80 ರಷ್ಟು ಹೃದಯಘಾತ ಕಡಿಮೆಯಾಗುತ್ತದೆ. ರಕ್ತದಾನಿಗಳು ಸಮಾಜದ ನಿಜವಾದ ಹೀರೋಗಳು. ಇಂದು ರಕ್ತದ ಕೊರತೆ ಸಾಕಷ್ಟು ಇದೆ. ಸಕಾಲದಲ್ಲಿ ರಕ್ತ ಸಿಗದೇ ಸಾಕಷ್ಟು ಜನ ಪ್ರಾಣವನ್ನು ಬಿಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಯುವಕರು ಯುವತಿಯರು ರಕ್ತದಾನ ಮಾಡಿ ಸದೃಢವಾದ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದು ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ನಿರ್ದೇಶಕರಾದ ಟಿ.ಆರ್.ಅಶ್ವಥ್ ನಾರಾಯಣ ಶೆಟ್ಟಿ ಮಾತನಾಡಿ, ಮೂಢನಂಬಿಕೆಯಿಂದ ಹೊರ ಬಂದು ರಕ್ತದಾನ ಮಾಡಿ ಇನ್ನೊಬ್ಬರ ಪ್ರಾಣ ಉಳಿಸುವ ಪುಣ್ಯದ ಕೆಲಸದಲ್ಲಿ ನಾವು ನೀವೆಲ್ಲರೂ ಪಾಲ್ಗೊಳ್ಳೋಣ. ಎಲ್ಲಾ ದಾನಗಳಿಗಿಂತ ರಕ್ತದಾನ ಶ್ರೇಷ್ಠದಾನ ಎಂದು ನುಡಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷರಾದ ಜಿ.ವಿಜಯ್ ಕುಮಾರ್ ಮಾತನಾಡಿ, ನಿಜವಾದ ಮನುಕುಲದ ಸೇವೆಯನ್ನು ಇಂದು ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಮಾಡುತ್ತಿದೆ. ಡಾಕ್ಟರ್ ರಾಜಕುಮಾರ್ ಅವರು ಕನ್ನಡ ಚಿತ್ರರಂಗದ ಆಸ್ತಿ. ಅವರ ಹೋರಾಟಗಳು ಇಂದಿಗೂ ಜನಮಾನಸದಲ್ಲಿ ಇವೆ. ಅವರ ಹುಟ್ಟುಹಬ್ಬವನ್ನು ರಕ್ತದಾನದ ಮುಖಾಂತರ ಮಾಡುತ್ತಿರುವುದು ಪ್ರಶಂಸನೀಯ ಸಂಗತಿ ಎಂದು ಶ್ಲಾಘಿಸಿದರು.

Acharya Tulsi National College of Commerce ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಮಮತಾ.ಪಿ.ಆರ್ ಮಾತನಾಡಿ, ಇಂದು ರಕ್ತದಾನ ಹಾಗೂ ನೇತ್ರ ತಪಾಸಣಾ ಶಿಬಿರವನ್ನು ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ಇಂತಹ ಪವಿತ್ರ ಕಾರ್ಯದಲ್ಲಿ ನಮ್ಮ ಮಕ್ಕಳು ಪಾಲ್ಗೊಳ್ಳುತ್ತಿರುವುದು ತುಂಬಾ ಹೆಮ್ಮೆಯ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ನಮ್ಮ ಕಾಲೇಜಿನಲ್ಲಿ ಇರುವ ಎಲ್ಲಾ ವಿದ್ಯಾರ್ಥಿಗಳು ಸಹ ರಕ್ತದಾನ ಮಾಡುವಂತೆ ಅವರಿಗೆ ಮನವರಿಸಲಾಗುವುದು ಎಂದು ನುಡಿದರು.

ವೇದಿಕೆಯಲ್ಲಿ ಪ್ರೊ. ಕೆ.ಎಂ.ನಾಗರಾಜ್ ಹಾಗೂ ಮೆಗ್ಗಾನ್ ಆಸ್ಪತ್ರೆಯ ವೈದ್ಯರಾದ ಪ್ರದೀಪ್, ಡಾ. ಪ್ರದೀಮ್ಯ, ಶೃತಿ.ಕೆ, ಸೌಪರ್ಣಿಕ ಉಮೇಶ್ ಹಾಗೂ ಶಂಕರ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...