Thursday, June 18, 2026
Thursday, June 18, 2026

Scouts and Guides Shivamogga ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ವತಿಯಿಂದ ಮೃತ ಮಂಜುನಾಥ್ ರಾವ್ ಗೆ ಭಾವಪೂರ್ಣ ಶ್ರದ್ಧಾಂಜಲಿ

Date:

Scouts and Guides Shivamogga ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮಂಜುನಾಥ್ ರಾವ್ ರವರನ್ನು ಕೊಂದು ತಮ್ಮ ರಾಕ್ಷಸತನವನ್ನು ತೋರಿಸಿದ್ದಾರೆ ಎಂದು ಜಿಲ್ಲಾಮುಖ್ಯ ಆಯುಕ್ತರಾದ ಶಕುಂತಲಾ ಚಂದ್ರಶೇಖರ್ ಹೇಳಿದರು.

ಸ್ಕೌಟ್ಸ್ ಅಂಡ್ ಗೈಡ್ಸ್, ಶಿವಮೊಗ್ಗ ಜಿಲ್ಲಾ ಸಂಸ್ಥೆ, ಸ್ಥಳೀಯ ಸಂಸ್ಥೆ ವತಿಯಿಂದ ನೇತಾಜಿ ವೃತ್ತದಿಂದ ಕ್ಯಾಂಡಲ್ ಮಾರ್ಚ್ ಮಾಡುವುದರೊಂದಿಗೆ ಅವರ ಮನೆಯವರೆಗೆ ತೆರಳಿ ಮೃತರಿಗೆ ಭಾವಪೂರ್ಣ ಸಲ್ಲಿಸುತ್ತ ಪತ್ನಿ ಪಲ್ಲವಿ ಹಾಗೂ ಮಗನಿಗೆ ಸಾಂತ್ವಾನದ ನುಡಿಗಳನ್ನು ಹೇಳಿ ಧೈರ್ಯ ತುಂಬಿದರು.

ಪತ್ನಿ ಪಲ್ಲವಿ ಮತ್ತು ಮಗ ಅಭಿಜಯ್ ಮುಂದೆಯೇ ಪತಿ ಮಂಜುನಾಥ್ ನನ್ನು ಕೊಂದು ಭಯೋತ್ಪಾದಕರ ವಿರುದ್ಧ ಧ್ಯೇರ್ಯ ತೋರಿ ಮಾತನಾಡಿದ್ದೀರಿ, ಮುಂಚಿನ ದಿನಗಳು ಸಂತೋಷದಿಂದ ಕಳೆದ ದಿನಗಳಾಗಿದ್ದವು, ನಿಮ್ಮ ಎದುರು ಗುಂಡಿಟ್ಟು ಕೊಲ್ಲುವಾಗ ಅಲ್ಲೆ ಇದ್ದೀರಿ, ಇಂತಹ ದಿನ ಬರುತ್ತದೆ ಎಂದು ನೀವು ಯಾರು ಊಹಿಸಿರಲಿಲ್ಲ, ದೇವರು ನಿಮ್ಮ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ನುಡಿದರು.

Scouts and Guides Shivamogga ಕೇಂದ್ರ ಸ್ಥಾನಿಕ ಆಯುಕ್ತರಾದ ಜಿ.ವಿಜಯಕುಮಾರ್ ಮಾತನಾಡಿ, ಕಾಶ್ಮೀರದಲ್ಲಿ ಭಯೋತ್ಪಾದಕರು ರಾಕ್ಷಸತನದಿಂದ ಅಟ್ಟ ಹಾಸ ಮೆರೆದಿದ್ದಾರೆ. ಶಿವಮೊಗ್ಗದ ಮಂಜುನಾಥ್ ನನ್ನು ಗುಂಡಿಟ್ಟು ಕೊಂದು ಹಾಕಿದ್ದಾರೆ. ಭಯೋತ್ಪಾದಕರ ವಿರುದ್ಧದ ಹೋರಾಟ ಇನ್ನಷ್ಟು ತೀವ್ರಗೊಳಿಸಿ ದೇಶದಲ್ಲಿ ಭಯೋತ್ಪಾದನೆಯನ್ನು ಬುಡ ಸಮೇತ ಕಿತ್ತು ಹಾಕುವ ಅವಶ್ಯಕತೆಯಿದೆ ಎಂದ ಅವರು, ಮಂಜುನಾಥ್ ಪತ್ನಿ ಪಲ್ಲವಿ ಹಾಗೂ ಮಗ ಅಭಿಜಯ್ ಗೆ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದರು.ಈ ಸಮಯದಲ್ಲಿ ರೋವರ್ ವಿಭಾಗದ ಜಿಲ್ಲಾ ಆಯುಕ್ತರಾದ ಕೆ.ರವಿ, ಜಿಲ್ಲಾ ಕಾರ್ಯದರ್ಶಿಗಳಾದ ಚಂದ್ರಶೇಖರಯ್ಯ.ಕೆ.ವಿ, ಮಲ್ಲಿಕಾರ್ಜುನ ಕಾನೂರು, ಲಕ್ಷ್ಮೀ ರವಿ, ಚಂದ್ರಶೇಖರ್, ಕೃಷ್ಣಸ್ವಾಮಿ, ಕಾತ್ಯಾಯಿನಿ, ಮೀನಾಕ್ಷಮ್ಮ, ನಾಗರಾಜ್, ಶಿವಮೊಗ್ಗ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಗಳಾದ ರಾಜೇಶ್.ಎ.ವಿ, ಸ್ಕೌಟ್ ಮತ್ತು ಗೈಡ್ಸ್, ಹಾಗೂ ರೋವರ್ಸ್ ಮತ್ತು ನಳಿನಿ ಐತಾಳ್. ರೆಂಜರ್ಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...