Thursday, September 17, 2026
Thursday, September 17, 2026

Mescom ಭದ್ರಾವತಿ ಮೆಸ್ಕಾಂ ಉಪ ಕಛೇರಿಯಲ್ಲಿ ಮೇ 6 ರಂದು ಜನಸಂಪರ್ಕ ಸಭೆ

Date:

Mescom ಶಿವಮೊಗ್ಗ ಮಹಾನಗರ ಪಾಲಿಕೆಯು ಮೇ 05 ರಿಂದ ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆೆ ಮಾಡಿ, ರೇಬಿಸ್ ವಿರುದ್ಧ ಲಸಿಕೆ ಹಾಗೂ ಕಿವಿಗೆ ಗುರುತು ಮಾಡಿ ಕಾರ್ಯಾಚರಣೆ ಪೂರ್ಣವಾದ ಬಳಿಕ ಅವುಗಳನ್ನು ಹಿಡಿದ ಸ್ಥಳಗಳಲ್ಲಿ ಬಿಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಈ ಶಸ್ತ್ರಚಿಕಿತ್ಸೆಯು ಮಾನವೀಯ ಹಾಗೂ ವೈಜ್ಞಾನಿಕ ರೀತಿಯಲ್ಲಿ ಶ್ವಾನಗಳ ಸಂತತಿಯನ್ನು ನಿಯಂತ್ರಣದಲ್ಲಿಡುವುದು, ಪ್ರಾಣಿಜನ್ಯ ರೋಗಗಳಾದ ರೇಬಿಸ್, ಲೆಪ್ಪೋಸ್ಟೈರಾ ಇತ್ಯಾದಿ ರೋಗಗಳಿಂದ ಸಾರ್ವಜನಿಕ ಆರೋಗ್ಯ ರಕ್ಷಣೆ ಮಾಡುವುದು ಹಾಗೂ ಬೀದಿನಾಯಿಗಳಿಂದ ಸಾರ್ವಜನಿಕರಿಗಾಗುವ ತೊಂದರೆಗಳಿಂದ ಮುಕ್ತಗೊಳಿಸುವ ಉದ್ದೇಶ ಹೊಂದಿದೆ.

ಈ ಶಸ್ತ್ರಚಿಕಿತ್ಸೆಯು ರಾಜೀವ್‌ಗಾಂಧಿ ಬಡಾವಣೆಯ ಮಹಾವೀರ್ ಗೋಶಾಲೆ ಪಕ್ಕ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಪಾಲಿಕೆ ಸಹಾಯವಾಣಿ ಸಂ.: 18004257677 ನ್ನು ಸಂಪರ್ಕಿಸುವಂತೆ ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

Mescom ಭದ್ರಾವತಿ ಮೆಸ್ಕಾಂ ನಗರ ಉಪವಿಭಾಗ ಕಛೇರಿಯಲ್ಲಿ ಮೇ 06 ರಂದು ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನ ಸಂಪರ್ಕಸಭೆ ನಡೆಯಲ್ಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9448289454.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...