Wednesday, May 6, 2026
Wednesday, May 6, 2026

Madhu Bangarappa ಜಿಪಿಎಸ್ & ಟ್ರ್ಯಾಕಿಂಗ್ ಉಪಕರಣ ಅಳವಡಿಕೆ ಆದೇಶ ರದ್ದುಪಡಿಸಲು ಸಚಿವರಲ್ಲಿ ಚಾಲಕರ ಸಂಘದ ಮನವಿ

Date:

Madhu Bangarappa ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಸೋಮವಾರದಂದು ನಗರದ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದರು.
ಶಿವಮೊಗ್ಗ-ಭದ್ರಾವತಿ ಮೀಟರ್ ಟ್ಯಾಕ್ಸಿ ಅಸೋಸಿಯೇಷನ್‌ನವರು ತಮ್ಮ ಟ್ಯಾಕ್ಸಿಗಳಿಗೆ ಜಿಪಿಎಸ್ ಮತ್ತು ಟ್ರಾö್ಯಕಿಂಗ್ ವ್ಯವಸ್ಥೆ ಅಳವಡಿಕೆ ಮಾಡಬೇಕೆಂಬ ಆದೇಶವಿರುತ್ತದೆ. ಈ ವ್ಯವಸ್ಥೆ ಇಲ್ಲದಿದ್ದಲ್ಲಿ ಆರ್‌ಟಿಓ ಕಚೇರಿಯಿಂದ ಎಫ್‌ಸಿ ಮಾಡಿಸಲು ಬರುವುದಿಲ್ಲ. ಆದರೆ ಈ ವ್ಯವಸ್ಥೆ ಅಳವಡಿಕೆಯಿಂದ ಟ್ಯಾಕ್ಸಿ ನಡೆಸುವವರಿಗೆ ಅಧಿಕ ಖರ್ಚು ಬರುತ್ತದೆ. ಹಾಗೂ ಈ ಟ್ಯಾಕ್ಸಿಗಳು ಶಿವಮೊಗ್ಗ ಮತ್ತು ಭದ್ರಾವತಿ ನಡುವೆ ಮಾತ್ರ ಕಾರ್ಯಾಚರಣೆ ಮಾಡುತ್ತಿರುವ ಕಾರಣ ಮತ್ತು ಅಧಿಕ ಖರ್ಚು ಆಗುವುದರಿಂದ ಸದರಿ ವ್ಯವಸ್ಥೆಯನ್ನು ರದ್ದುಪಡಿಸಿ ಅನುಕೂಲ ಮಾಡಿಕೊಡಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದರು.
ಪ್ರಿಯಾಂಕ ಬಡಾವಣೆ ನಿವಾಸಿಗಳ ಹಿತರಕ್ಷಣಾ ವೇದಿಕೆಯ ಸದಸ್ಯರು ಪ್ರಿಯಾಂಕ ಬಡಾವಣೆಯಲ್ಲಿ ಉದ್ದ ಮತ್ತು ಅಡ್ಡ ರಸ್ತೆಗೆ ಹೊಸದಾಗಿ ಡಾಂಬರೀಕರಣ ಮಾಡಿಸಿಕೊಡಬೇಕೆಂದು ಮನವಿ ಮಾಡಿದರು.
ಜಿಲ್ಲಾ ತೆಲುಗು ಅರುಂಧತಿ ಆದಿಕರ್ನಾಟಕ ಸಮಾಜದವರು ನಗರದ 27 ನೇ ವಾರ್ಡಿನಲ್ಲಿ ಅರ್ಧಕ್ಕೆ ನಿಲ್ಲಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಪೂರ್ಣಗೊಳಿಸಲು ರೂ.50 ಲಕ್ಷ ಅನುದಾನವನ್ನು ಮಂಜೂರು ಮಾಡಬೇಕೆಂದು ಕೋರಿದರು.
Madhu Bangarappa ಬನಶಂಕರಿ ಬಡಾವಣೆಯ ಆಂಜನೇಯ ಸಮಿತಿಯವರು ದೇವಸ್ಥಾನ ನಿರ್ಮಿಸಲು ಅನುದಾನ ನೀಡುವಂತೆ ಕೋರಿದರು. ಹಾಗೂ ಉದ್ಯೋಗ ಒದಗಿಸುವಂತೆ ಕೋರಿ ಇಬ್ಬರು ಮಹಿಳೆಯರು ಅರ್ಜಿ ನೀಡಿದರು. ಸಚಿವರು 10 ಕ್ಕೂ ಅಧಿಕ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...