Wednesday, December 17, 2025
Wednesday, December 17, 2025

Madhu Bangarappa ಜಿಪಿಎಸ್ & ಟ್ರ್ಯಾಕಿಂಗ್ ಉಪಕರಣ ಅಳವಡಿಕೆ ಆದೇಶ ರದ್ದುಪಡಿಸಲು ಸಚಿವರಲ್ಲಿ ಚಾಲಕರ ಸಂಘದ ಮನವಿ

Date:

Madhu Bangarappa ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಸೋಮವಾರದಂದು ನಗರದ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದರು.
ಶಿವಮೊಗ್ಗ-ಭದ್ರಾವತಿ ಮೀಟರ್ ಟ್ಯಾಕ್ಸಿ ಅಸೋಸಿಯೇಷನ್‌ನವರು ತಮ್ಮ ಟ್ಯಾಕ್ಸಿಗಳಿಗೆ ಜಿಪಿಎಸ್ ಮತ್ತು ಟ್ರಾö್ಯಕಿಂಗ್ ವ್ಯವಸ್ಥೆ ಅಳವಡಿಕೆ ಮಾಡಬೇಕೆಂಬ ಆದೇಶವಿರುತ್ತದೆ. ಈ ವ್ಯವಸ್ಥೆ ಇಲ್ಲದಿದ್ದಲ್ಲಿ ಆರ್‌ಟಿಓ ಕಚೇರಿಯಿಂದ ಎಫ್‌ಸಿ ಮಾಡಿಸಲು ಬರುವುದಿಲ್ಲ. ಆದರೆ ಈ ವ್ಯವಸ್ಥೆ ಅಳವಡಿಕೆಯಿಂದ ಟ್ಯಾಕ್ಸಿ ನಡೆಸುವವರಿಗೆ ಅಧಿಕ ಖರ್ಚು ಬರುತ್ತದೆ. ಹಾಗೂ ಈ ಟ್ಯಾಕ್ಸಿಗಳು ಶಿವಮೊಗ್ಗ ಮತ್ತು ಭದ್ರಾವತಿ ನಡುವೆ ಮಾತ್ರ ಕಾರ್ಯಾಚರಣೆ ಮಾಡುತ್ತಿರುವ ಕಾರಣ ಮತ್ತು ಅಧಿಕ ಖರ್ಚು ಆಗುವುದರಿಂದ ಸದರಿ ವ್ಯವಸ್ಥೆಯನ್ನು ರದ್ದುಪಡಿಸಿ ಅನುಕೂಲ ಮಾಡಿಕೊಡಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದರು.
ಪ್ರಿಯಾಂಕ ಬಡಾವಣೆ ನಿವಾಸಿಗಳ ಹಿತರಕ್ಷಣಾ ವೇದಿಕೆಯ ಸದಸ್ಯರು ಪ್ರಿಯಾಂಕ ಬಡಾವಣೆಯಲ್ಲಿ ಉದ್ದ ಮತ್ತು ಅಡ್ಡ ರಸ್ತೆಗೆ ಹೊಸದಾಗಿ ಡಾಂಬರೀಕರಣ ಮಾಡಿಸಿಕೊಡಬೇಕೆಂದು ಮನವಿ ಮಾಡಿದರು.
ಜಿಲ್ಲಾ ತೆಲುಗು ಅರುಂಧತಿ ಆದಿಕರ್ನಾಟಕ ಸಮಾಜದವರು ನಗರದ 27 ನೇ ವಾರ್ಡಿನಲ್ಲಿ ಅರ್ಧಕ್ಕೆ ನಿಲ್ಲಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಪೂರ್ಣಗೊಳಿಸಲು ರೂ.50 ಲಕ್ಷ ಅನುದಾನವನ್ನು ಮಂಜೂರು ಮಾಡಬೇಕೆಂದು ಕೋರಿದರು.
Madhu Bangarappa ಬನಶಂಕರಿ ಬಡಾವಣೆಯ ಆಂಜನೇಯ ಸಮಿತಿಯವರು ದೇವಸ್ಥಾನ ನಿರ್ಮಿಸಲು ಅನುದಾನ ನೀಡುವಂತೆ ಕೋರಿದರು. ಹಾಗೂ ಉದ್ಯೋಗ ಒದಗಿಸುವಂತೆ ಕೋರಿ ಇಬ್ಬರು ಮಹಿಳೆಯರು ಅರ್ಜಿ ನೀಡಿದರು. ಸಚಿವರು 10 ಕ್ಕೂ ಅಧಿಕ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...