Sunday, August 2, 2026
Sunday, August 2, 2026

Karnataka Working Journalists Association Shivamogga ರಾಜ್ಯ ಕಾರ್ಯನಿರತ ಪತ್ರಕರ್ತರಿಗಾಗಿ ಮೇ11 ರಂದು ವಾರ್ಷಿಕ ಕ್ರೀಡಾಕೂಟ & ಸ್ನೇಹಮಿಲನ

Date:

Karnataka Working Journalists Association Shivamogga ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಮೇ. 11ರ ಭಾನುವಾರ ಬೆಳಿಗ್ಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಪತ್ರಕರ್ತರು, ಪತ್ರಿಕಾಲಯಗಳ ಸಿಬ್ಬಂದಿಗಳು ಹಾಗೂ ಅವರ ಕುಟುಂಬವರ್ಗದವರಿಗಾಗಿ ವಾರ್ಷಿಕ ಕ್ರೀಡಾಕೂಟ ಹಾಗೂ ಸ್ನೇಹ ಮಿಲನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮವನ್ನು ಬೆಳಿಗ್ಗೆ 9:30ಕ್ಕೆ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆಯವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕರಾದ ಡಿ. ಎಸ್. ಅರುಣ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ನಿರ್ದೇಶಕ ಎನ್. ರವಿಕುಮಾರ್, ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖಾ ನಾಯ್ಕ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಕಾರ್ಯಕಾರಿ ಸಮಿತಿ ಸದಸ್ಯರಾದ ಭಂಡಿಗಡಿ ನಂಜುಂಡಪ್ಪ ಪಾಲ್ಗೊಳ್ಳಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆಯ ಅಧ್ಯಕ್ಷ ಕೆ. ವಿ. ಶಿವಕುಮಾರ್ ವಹಿಸಲಿದ್ದಾರೆ.
Karnataka Working Journalists Association Shivamogga ನಂತರ ಮನೋರಂಜನೆ ಸಹಿತ ವಿವಿಧ ಕ್ರೀಡಾ ಚಟುವಟಿಕೆಗಳು ಮುಂದುವರಿಯಲಿವೆ.
ಸಂಜೆ 5:00ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಶಾಸಕಿ ಶಾರದಾ ಪೂರ್ಯಾನಾಯ್ಕರವರು ಪಾಲ್ಗೊಂಡು ವಿಜೇತರಿಗೆ ಬಹುಮಾನಗಳನ್ನು ವಿತರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ರಕ್ಷಣಾಽಕಾರಿ ಮಿಥುನ್ ಕುಮಾರ್, ಶಿವಮೊಗ್ಗ-ಭದ್ರಾವತಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್. ಎಸ್. ಸುಂದರೇಶ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ನಿರ್ದೇಶಕ ಎನ್. ರವಿಕುಮಾರ್, ಪಾಲ್ಗೊಳ್ಳಲಿದ್ದಾರೆ.
ಈ ಕ್ರೀಡಾಕೂಟ ಹಾಗೂ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಸಂಘದ ಎಲ್ಲಾ ಸದಸ್ಯರು, ಅವರ ಕುಟುಂಬ ವರ್ಗದವರು ಹಾಗೂ ಪತ್ರಿಕಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು, ಕುಟುಂಬ ವರ್ಗದವರು ಪಾಲ್ಗೊಳ್ಳುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ವಿ. ಟಿ. ಅರುಣ್, ಕಾರ್ಯದರ್ಶಿಗಳಾದ ಕೆ. ಆರ್. ಸೋಮನಾಥ್, ಗ.ರಾ. ಶ್ರೀನಿವಾಸ್, ದೀಪಕ್ ಸಾಗರ್ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...