Wednesday, December 17, 2025
Wednesday, December 17, 2025

Shivamogga Minority Welfare Department ಶಿವಮೊಗ್ಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆ/ ಕಾಲೇಜುಗಳಿಗೆ ತಾತ್ಕಾಲಿಕ ಹುದ್ದೆಗಳ ನೇಮಕಾತಿ ಪ್ರಕಟಣೆ

Date:

Shivamogga Minority Welfare Department ಶಿವಮೊಗ್ಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ/ ಕಾಲೇಜುಗಳಿಗೆ ಹಾಗೂ ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 1 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ವಸತಿ ಶಾಲೆ/ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ವಿವರ; ಕನ್ನಡ ಭಾಷಾ ಶಿಕ್ಷಕರು-7, ಇಂಗ್ಲೀಷ್ ಭಾಷಾ ಶಿಕ್ಷಕರು-9, ಹಿಂದಿ ಭಾಷಾ ಶಿಕ್ಷಕರು-4, ಉರ್ದು ಭಾಷಾ ಶಿಕ್ಷಕರು-2, ಗಣಿತ ಶಿಕ್ಷಕರು-4, ಸಾಮಾನ್ಯ ವಿಜ್ಞಾನ ಶಿಕ್ಷಕರು-4, ಸಮಾಜ ವಿಜ್ಞಾನ ಶಿಕ್ಷಕರು-8, ಗಣಕಯಂತ್ರ ಶಿಕ್ಷಕರು-2, ದೈಹಿಕ ಶಿಕ್ಷಣ ಶಿಕ್ಷಕರು-2 ಒಟ್ಟು-42 ಅತಿಥಿ ಶಿಕ್ಷಕರು.
ವಸತಿ ಶಾಲೆ/ಮೌಲಾನಾ ಆಜಾದ್ ಮಾದರಿ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ವಿವರ; ಕನ್ನಡ ಭಾಷಾ ಶಿಕ್ಷಕರು-3, ಇಂಗ್ಲೀಷ್ ಭಾಷಾ ಶಿಕ್ಷಕರು-3, ಉರ್ದು ಭಾಷಾ ಶಿಕ್ಷಕರು-3, ಗಣಿತ ಶಿಕ್ಷಕರು-3, ಭೌತಶಾಸ್ತ್ರ ಉಪನ್ಯಾಸಕರು-3, ರಸಾಯನಶಾಸ್ತ್ರ ಉಪನ್ಯಾಸಕರು-3, ಜೀವಶಾಸ್ತ್ರ ಉಪನ್ಯಾಸಕರು-3, ವ್ಯವಹಾರ ಅಧ್ಯಯನ ಉಪನ್ಯಾಸಕರು-1, ಲೆಕ್ಕಶಾಸ್ತ್ರ ಉಪನ್ಯಾಸಕರು -2, ಕಂಪ್ಯೂಟರ್ ಸೈನ್ಸ್ ಉಪನ್ಯಾಸಕರು-1, ಅರ್ಥಶಾಸ್ತ್ರ ಉಪನ್ಯಾಸಕರು-1, ಇತಿಹಾಸ ಉಪನ್ಯಾಸಕರು-1 ಒಟ್ಟು 27 ಉಪನ್ಯಾಸಕರು.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶಿವಮೊಗ್ಗ ಹಾಗೂ ಎಲ್ಲಾ ತಾಲೂಕು ಮಾಹಿತಿ ಕೇಂದ್ರ ಕಚೇರಿಗಳಲ್ಲಿ ಅಥವಾ ವೆಬ್‌ಸೈಟ್ https://dom.karnataka.gov.in ರಿಂದ ಪಡೆದು, ಮೇ 19 ರೊಳಗಾಗಿ ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Shivamogga Minority Welfare Department ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಶಿವಮೊಗ್ಗ -7676888388, ಭದ್ರಾವತಿ-9538853680, ತೀರ್ಥಹಳ್ಳಿ-8861982835, ಸೊರಬ-9513815513, ಶಿಕಾರಿಪುರ-7829136724, ಹೊಸನಗರ-9008447029 ಹಾಗೂ ಸಾಗರ-7338222907 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...