Sunday, December 7, 2025
Sunday, December 7, 2025

Minister Dinesh Gundu Rao ಅಂಬ್ಯುಲೆನ್ಸ್-108 ಸೇವೆಗಳನ್ನ ಇನ್ನುಮುಂದೆ ಸರ್ಕಾರವೇ ನಿರ್ವಹಿಸುತ್ತದೆ- ಸಚಿವ ದಿನೇಶ್ ಗುಂಡೂರಾವ್

Date:

Minister Dinesh Gundu Rao 108 ಅಂಬ್ಯುಲೆನ್ಸ್ ಸೇವೆಯನ್ನು ಇನ್ಮುಂದೆ ಸರ್ಕಾರವೇ ನಿರ್ವಹಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು‌ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಇದುವರೆಗೂ ಈ ಸೇವೆಯನ್ನು ಖಾಸಗಿಯವರು ನಿರ್ವಹಿಸುತ್ತಿದ್ದು ಇದರಿಂದಾಗಿ ಸಾಕಷ್ಟು ಸಮಸ್ಯೆಗಳಿದ್ದವು. ಈ ಸಮಸ್ಯೆಗಳಿಗೆ ಪೂರ್ಣವಿರಾಮ ಹಾಕಲು ಹಾಗು ಖಾಸಗಿ ನಿರ್ವಹಣೆಯಿಂದಾಗಿ ಸರ್ಕಾರಕ್ಕೆ ಆಗುತ್ತಿದ್ದ ನಷ್ಟ ತಪ್ಪಿಸಲು ನಮ್ಮ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ‌ ಎಂದು ಸುದ್ದಿಗಾರರಿಗೆ ತಿಳಿಸಿದರು.

ಅಂಬ್ಯುಲೆನ್ಸ್’ಗಳು ಸರ್ಕಾರದ್ದೇ ಆದರೂ ನಿರ್ವಹಣೆ ಮಾತ್ರ ಖಾಸಗಿಯವರದ್ದಾಗಿತ್ತು. ವಾಹನಗಳ ಡಿಸೇಲ್ ವೆಚ್ಚವನ್ನು ಸರ್ಕಾರವೇ ಭರಿಸುತ್ತಿತ್ತು. ಚಾಲಕರ ವೇತನವನ್ನು ಸರ್ಕಾರ ಬಿಡುಗಡೆಗೊಳಿಸಿದರೂ ಏಜೆನ್ಸಿಗಳು ಸಕಾಲಕ್ಕೆ ಪಾವತಿ ಮಾಡುತ್ತಿರಲಿಲ್ಲ. ಏಜೆನ್ಸಿಗಳು ವೇತನ ಬಿಡುಗಡೆಗೊಳಿಸಲು ಪ್ರತಿ ಬಾರಿ ಸರ್ಕಾರ ಮಧ್ಯೆ ಪ್ರವೇಶಿಸಬೇಕಾಗಿತ್ತು. ಖಾಸಗಿ ನಿರ್ವಹಣೆಯಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವೇ ಆಗುತ್ತಿತ್ತು.

Minister Dinesh Gundu Rao ಆದರಿಂದ ಸರ್ಕಾರ ಈ ಐತಿಹಾಸಿಕ ನಿರ್ಧಾರಕ್ಕೆ ಬಂದಿದೆ. ಈಗಾಗಲೇ ಇದಕ್ಕಾಗಿ ಪ್ರತ್ಯೇಕ ಸಾಫ್ಟ್ವೇರ್ ಸಿದ್ಧಪಡಿಸಲಾಗಿದ್ದು ಚಾಮರಾಜನಗರದಲ್ಲಿ ಯಶಸ್ವಿಯಾಗಿ ಪ್ರಾಯೋಗಿಕ ಕಾರ್ಯಾಚರಣೆ ನಡೆಸಲಾಗಿದೆ. ಮುಂಬರುವ ತಿಂಗಳುಗಳಲ್ಲಿ ರಾಜ್ಯಾದ್ಯಂತ 108 ಅಂಬ್ಯುಲೆನ್ಸ್ ಸೇವೆಗಳನ್ನು ಆರೋಗ್ಯ ಇಲಾಖೆಯ ನಿರ್ವಹಣಾ ವ್ಯಾಪ್ತಿಗೆ ತರಲಾಗುವುದು ಎಂದು ಸಚಿವರು ನೀಡಿದ ಹೇಳಿಕೆಯಿಂದ ಅತಂತ್ರವಾಗಿದ್ದ ಅಂಬ್ಯುಲೆನ್ಸ್ 108 ಸೇವೆಗೆ ಚೈತನ್ಯ ತುಂಬಿದಂತಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...