Thursday, June 18, 2026
Thursday, June 18, 2026

KARNATAKA RESIDENTIAL EDUCATIONAL INSTITUTIONS SOCIETY ವಸತಿ ಶಾಲೆಗಳ ಪ್ರವೇಶಕ್ಕೆ ವಿಶೇಷ ವರ್ಗದಡಿ ವಿದ್ಯಾರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನ

Date:

KARNATAKA RESIDENTIAL EDUCATIONAL INSTITUTIONS SOCIETY  2025-26ನೇ ಶೈಕ್ಷಣಿಕ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ಪಾಜಪೇಯಿ/ ಕಿತ್ತೂರು ರಾಣಿ ಚೆನ್ನಮ್ಮ / ಡಾ|| ಬಿ.ಆರ್. ಅಂಬೇಡ್ಕರ್/ ಶ್ರೀಮತಿ ಇಂದಿರಾ ಗಾಂಧಿ/ ನಾರಾಯಣ ಗುರು ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಕೆಲವು ವಿಶೇಷ ವರ್ಗದಡಿ ಪ್ರವೇಶಾವಕಾಶವನ್ನು ಕಲ್ಪಿಸಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ
ಸಫಾಯಿ ಕರ್ಮಚಾರಿ/ ಗುರುತಿಸಿದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್/ ಚಿಂದಿ ಆಯುವವರು / ಸ್ಮಶಾನ ಕಾರ್ಮಿಕರ ಮಕ್ಕಳು. ಬಾಲ ಕಾರ್ಮಿಕರು/ ಜೀತ ವಿಮುಕ್ತ ಕಾರ್ಮಿಕರ ಮಕ್ಕಳು/ ಗುರುತಿಸಿರುವ ಮಾಜಿ ದೇವದಾಸಿಯರ ಮಕ್ಕಳು. 25% ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು/ ಹೆಚ್.ಐ.ವಿ.ಗೆ ತುತ್ತಾದ ಪೋಷಕರ ಮಕ್ಕಳು/ ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಮಕ್ಕಳು/ ಅನಾಥ ಮಕ್ಕಳು. ಗುರುತಿಸಿರುವ ಅಲೆಮಾರಿ/ ಅರೆ ಅಲೆಮಾರಿ/ ಸೂಕ್ಷ್ಮ- ಅತೀ ಸೂಕ್ಷ್ಮ ಸಮುದಾಯದ/ಸೈನಿಕರ ಮತ್ತು ಮಾಜಿ ಸೈನಿಕರ/ಸರ್ಕಾರಿ ಯೋಜನೆಗಳಿಂದ ಸ್ಥಳಾಂತರಗೊಂಡ ಪೋಷಕರ ಮಕ್ಕಳು. ಪ.ಜಾ./ಪ.ಪಂ.ಗಳ ಆಶ್ರಮ ವಸತಿ ಶಾಲೆಗಳಲ್ಲಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳು ಈ ಎಲ್ಲಾ ವಿಶೇಷ ವರ್ಗಗಳು ಅರ್ಜಿ ಸಲ್ಲಿಸಬಹುದಾಗಿದೆ.
KARNATAKA RESIDENTIAL EDUCATIONAL INSTITUTIONS SOCIETY  ಆಸಕ್ತರು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೆಬ್‌ಸೈಟ್ https://kreis.karnataka.gov.in ಲಿಂಕ್‌ನಲ್ಲಿ ಅಥವಾ ನೇರವಾಗಿ ವಸತಿ ಶಾಲೆಗೆ ತೆರಳಿ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿ 9482300400 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...