Dinesh Gundu Rao ಕಳೆದ ಒಂದು ವಾರದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಸೋಂಕಿತರಲ್ಲಿ ಕೊಂಚ ಏರಿಕೆಯಾಗಿದೆ. ಮುಂಜಾಗ್ರತ ಕ್ರಮಗಳನ್ನ ಸರ್ಕಾರ ತೆಗೆದುಕೊಳ್ಳುತ್ತಿದೆ. ರಾಜ್ಯದ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ರಾಜ್ಯದ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಉಸಿರಾಟದ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗಳಲ್ಲಿ ಅಡ್ಮಿಟ್ ಆದವರನ್ನ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಗೆ ಒಳಪಡಿಸಲು ಸೂಚಿಸಲಾಗಿದೆ. ಅಗತ್ಯ ಟೆಸ್ಟಿಂಗ್ ಕಿಟ್ ಗಳನ್ನ ತೆಗೆದಿರಿಸಿಕೊಳ್ಳಲು ಅಧಿಕಾರಿಗಳಿಗೆ ನಾನು ಸೂಚಿನೆ ನೀಡಿದ್ದೇನೆ. ಒಂದು ತಿಂಗಳಿಗೆ ಬೇಕಾಗುವ 5 ಸಾವಿರ RTPCR ಹಾಗೂ 5 ಸಾವಿರ VDRL ಟೆಸ್ಟಿಂಗ್ ಕಿಟ್ ಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ.
Dinesh Gundu Rao ಬಾಣಂತಿಯರು, ಗರ್ಭೀಣಿಯರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಉತ್ತಮ. ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಹೊಂದಿದ 35 ಜನರಲ್ಲಿ ಕೋವಿಡ್ ಗಂಭೀರವಾಗಿಲ್ಲ. ಸೌಮ್ಯ ಸ್ವಭಾವದ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಸಾರ್ವಜನಿಕರು ಕೋವಿಡ್ ಬಂತು ಎಂದು ಆತಂಕಗೊಳ್ಳದೇ ತಮ್ಮ ಸಹಜ ಜೀವನ ನಡೆಸಬಹುದು ಎಂದು ಸಚಿವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.
