Karnataka Legislative Assembly ಕಳೆದ ಅಧಿವೇಶನದ ಅವಧಿಯಲ್ಲಿ ದಿನಾಂಕ: 21.03.2025ರಂದು ಸದನದಲ್ಲಿ ಪೀಠದ ಆದೇಶವನ್ನು ಲೆಕ್ಕಿಸದೇ ಸದನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಾ, ಆಶಿಸ್ತಿನಿಂದ ಹಾಗೂ ಅಗೌರವದಿಂದ ನಡೆದುಕೊಂಡಿದ್ದರಿಂದ ಮಾನ್ಯ ವಿಧಾನಸಭಾ ಸದಸ್ಯರುಗಳಾದಂತಹ ಶ್ರೀ ದೊಡ್ಡನಗೌಡ ಹೆಚ್, ಪಾಟೀಲ್, (ವಿರೋಧ ಪಕ್ಷದ ಮುಖ್ಯ ಸಚೇತಕರು), ಡಾ: ಅಶ್ವಥ್ನಾರಾಯಣ್ ಸಿ.ಎನ್.. ಶ್ರೀ ಎಸ್.ಆರ್. ವಿಶ್ವನಾಥ್, ಶ್ರೀ ಬಿ.ಎ. ಬಸವರಾಜ, ಶ್ರೀ ಎಂ.ಆರ್. ಪಾಟೀಲ್, ಶ್ರೀ ಚನ್ನಬಸಪ್ಪ (ಚೆನ್ನಿ), ಶ್ರೀ ಬಿ. ಸುರೇಶ್ ಗೌಡ, ಶ್ರೀ ಉಮಾನಾಥ್ ಎ. ಕೋಟ್ಯಾನ್, ಶ್ರೀ ಶರಣು ಸಲಗರ, ಡಾ: ಶೈಲೇಂದ್ರ ಬೆಲ್ದಾಳೆ, ಶ್ರೀ ಸಿ.ಕೆ. ರಾಮಮೂರ್ತಿ, ಶ್ರೀ ಯಶಪಾಲ್ ಎ. ಸುವರ್ಣ, ಶ್ರೀ ಬಿ.ಪಿ. ಹರೀಶ್, ಡಾ: ಭರತ್ ಶೆಟ್ಟಿ ವೈ., ಶ್ರೀ ಮುನಿರತ್ನ, ಶ್ರೀ ಬಸವರಾಜ್, ಮತ್ತಿಮೂಡ್, ಶ್ರೀ ಧೀರಜ್ ಮುನಿರಾಜು ಮತ್ತು ಡಾ: ಚಂದ್ರು ಲಮಾಣಿ ಅವರುಗಳನ್ನು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳ ನಿಯಮ 348ರ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮಂಡಿಸಿದ ಹಾಗೂ ಸದನವು ಅಂಗೀಕರಿಸಿದ ಪ್ರಸ್ತಾವದಂತೆ ತಕ್ಷಣದಿಂದ ಜಾರಿಗೆ ಬರುವಂತೆ 6 ತಿಂಗಳುಗಳ
ಕಾಲ ಸದನಕ್ಕೆ ಬಾರದಂತೆ ತಡೆಹಿಡಿದು ಅಮಾನತ್ತುಗೊಳಿಸಿದ್ದ ನಿರ್ಣಯವನ್ನು ಹಿಂತೆಗೆದುಕೊಳ್ಳುವಂತೆ ಕೋರಿ ಮಾನ್ಯ ವಿರೋಧ ಪಕ್ಷದ ನಾಯಕರು ಹಾಗೂ ಅಮಾನತ್ತುಗೊಂಡ ಸದಸ್ಯರು ಸಲ್ಲಿಸಿದ್ದ ಮನವಿಯ ಬಗ್ಗೆ ದಿನಾಂಕ: 25.05.2025ರಂದು ಮಾನ್ಯ ಮುಖ್ಯಮಂತ್ರಿಗಳು, ಮಾನ್ಯ ಉಪ ಮುಖ್ಯಮಂತ್ರಿಯವರು, ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು, ಮಾನ್ಯ ಉಪ ಸಭಾಧ್ಯಕ್ಷರು ಮತ್ತು ಮಾನ್ಯ ವಿರೋಧ ಪಕ್ಷದ ನಾಯಕರೊಂದಿಗೆ ಸನ್ಮಾನ್ಯ ಸಭಾಧ್ಯಕ್ಷರು ಸಭೆ ನಡೆಸಿರುತ್ತಾರೆ.
Karnataka Legislative Assembly ಸದರಿ ಸಭೆಯಲ್ಲಿ, ಅಮಾನತ್ತಿನ ಅವಧಿಯಲ್ಲಿ ಈಗಾಗಲೇ 2 ತಿಂಗಳು ಕಳೆದಿದ್ದು, ಸದರಿ ಅವಧಿಯಲ್ಲಿ ಅಮಾನತ್ತುಗೊಂಡಿರುವ ಸದಸ್ಯರುಗಳು ತಮ್ಮ ನಡೆಯ ಬಗ್ಗೆ ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದು ಹಾಗೂ ಇನ್ನು ಮುಂದೆ ಸಂವಿಧಾನಾತ್ಮಕವಾಗಿ ಸದನದ ಕಾರ್ಯಕಲಾಪಗಳಲ್ಲಿ ಸಂಯಮದಿಂದ ನಡೆದುಕೊಳ್ಳುವುದಾಗಿ ತಿಳಿಸಿರುವುದನ್ನು ಪರಿಗಣಿಸಿ ಆಡಳಿತ ಪಕ್ಷದ ಶಾಸಕಾಂಗ ನಾಯಕರಾದ ಮಾನ್ಯ ಮುಖ್ಯಮಂತ್ರಿಯವರು, ಮಾನ್ಯ ಉಪ ಮುಖ್ಯಮಂತ್ರಿಯವರು. ಮಾನ್ಯ ವಿರೋಧ ಪಕ್ಷದ ನಾಯಕರು, ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಒಮ್ಮತ ಸೂಚಿಸಿದ ಹಿನ್ನೆಲೆಯಲ್ಲಿ
ಮುಂದಿನ ದಿನಗಳಲ್ಲಿ ಮಾನ್ಯ ಸದಸ್ಯರುಗಳು ಸಂವಿಧಾನತ್ಮಕವಾಗಿ ಮೂಲಭೂತ ಕರ್ತವ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡುವ ಉದ್ದೇಶದಿಂದ ಅಮಾನತುಗೊಳಿಸಲಾಗಿರುವ ಮಾನ್ಯ ವಿಧಾನಸಭಾ ಸದಸ್ಯರುಗಳಾದಂತಹ ಶ್ರೀ ದೊಡ್ಡನಗೌಡ ಹೆಚ್, ಪಾಟೀಲ್, (ವಿರೋಧ ಪಕ್ಷದ ಮುಖ್ಯ ಸಚೇತಕರು).
ಡಾ: ಅಶ್ವಥ್ ನಾರಾಯಣ್ ಸಿ.ಎನ್, ಶ್ರೀ ಎಸ್.ಆರ್. ವಿಶ್ವನಾಥ್, ಶ್ರೀ ಬಿ.ಎ. ಬಸವರಾಜ, ಶ್ರೀ ಎಂ.ಆರ್. ಪಾಟೀಲ್, ಶ್ರೀ ಚನ್ನಬಸಪ್ಪ (ಚೆನ್ನಿ), ಶ್ರೀ ಬಿ. ಸುರೇಶ್ ಗೌಡ, ಶ್ರೀ ಉಮಾನಾಥ್ ಎ. ಕೋಟ್ಯಾನ್, ಶ್ರೀ ಶರಣ ಸಲಗರ, ಡಾ: ಶೈಲೇಂದ್ರ ಬೆಲ್ದಾಳೆ, ಶ್ರೀ ಸಿ.ಕೆ. ರಾಮಮೂರ್ತಿ, ಶ್ರೀ ಯಶಪಾಲ್ ಎ. ಸುವರ್ಣ, ಶ್ರೀ ಬಿ.ಪಿ. ಹರೀಶ್, ಡಾ: ಭರತ್ ಶೆಟ್ಟಿ ವೈ., ಶ್ರೀ ಮುನಿರತ್ನ, ಶ್ರೀ ಬಸವರಾಜ್ ಮತ್ತಿಮೂಡ್, ಶ್ರೀ ಧೀರಜ್ ಮುನಿರಾಜು ಮತ್ತು ಡಾ: ಚಂದು ಲಮಾಣಿ ಅವರುಗಳನ್ನು ಅಮಾನತ್ತುಗೊಳಿಸಲಾಗಿದ್ದ ನಿರ್ಣಯವನ್ನು ಹಿಂತೆಗೆದುಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ.
Karnataka Legislative Assembly 18 ಶಾಸಕರ ಅಮಾನತು ರದ್ದು. ಸಭೆಯಲ್ಲಿ ಸ್ಪೀಕರ್ಯು.ಟಿ.ಖಾದರ್ ಚರ್ಚಿಸಿ ನಿರ್ಧಾರ
Date:
