Saturday, December 6, 2025
Saturday, December 6, 2025

ಸೊರಬದಲ್ಲಿ ಗೋಹತ್ಯೆ ಶಂಕೆ, ಸೂಕ್ತ ಕ್ರಮಕ್ಕೆ ಹಿಂದೂ‌ ಜಾಗರಣ ವೇದಿಕೆ ಆಗ್ರಹ

Date:

ಸೊರಬ ಪಟ್ಟಣದ ಹೊಸಪೇಟೆ ಬಡಾವಣೆಯ ದಂಡಾವತಿ ಸೇತುವೆ ಸಮೀಪ ಗೋ ಹತ್ಯೆ ನಡೆದಿರುವ ಕುರಿತು ಶಂಕೆ ವ್ಯಕ್ತವಾಗುತ್ತಿದ್ದು, ರಸ್ತೆಯಲ್ಲಿ ಗೋವಿನ ಪಾದದ ಹಟ್ಟೆ ಪತ್ತೆಯಾಗಿದೆ. ಇದು ಹಿಂದೂ ಕಾರ್ಯಕರ್ತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಮತ್ತೊಂದಡೆ ಗೋ ಕಳ್ಳತನ ನಡೆಯುವ ಬಗ್ಗೆ ಹಿಂದೂ ಸಂಘಟಕರು ಅನೇಕ ಬಾರಿ ಸಂಬಂಧ ಪಟ್ಟ ಇಲಾಖೆಗೆ ದೂರನ್ನು ನೀಡಿದ್ದಾರೆ. ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸಮೀಪದಲ್ಲಿ ವಿವಾಹ ಕಾರ್ಯಕ್ರಮವೊಂದು ನಡೆದಿದ್ದು ಅಲ್ಲಿ ಗೋ ಹತ್ಯೆ ನಡೆದಿದೆ ಎನ್ನಲಾಗುತ್ತಿದೆ.

ಪಟ್ಟಣದಲ್ಲಿ ಅಕ್ರಮ ಗೋ ಕಳ್ಳತನ ನಡೆಯುತ್ತಿದ್ದ ಬಗ್ಗೆ ಹಲವು ನಿದರ್ಶನ ಮತ್ತು ದಾಖಲೆಗಳಿವೆ. ಅಕ್ರಮ ಗೋಮಾಂಸದ ಸಾಗಾಟದ ಬಗ್ಗೆಯೂ ದಾಖಲೆಗಳಿದೆ. ಈ ನಡುವೆ ಪಟ್ಟಣದಲ್ಲಿ ಗೋ ಹತ್ಯೆ ನಡೆದಿರುವ ಕುರಿತು ಸಂಶಯ ವ್ಯಕ್ತವಾಗಿದ್ದು, ಕೂಡಲೇ ಸಂಬಂಧಪಟ್ಟ ಇಲಾಖೆಯವರು ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಪ್ರಮುಖ್ ಲೋಕೇಶ್ ಕಕ್ಕರಸಿ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...