Friday, August 14, 2026
Friday, August 14, 2026

Shikaripura Horticulture Department ಶಿಕಾರಿಪುರ: ತೋಟಗಾರಿಕೆ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

Date:

Shikaripura Horticulture Department ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ಸಹಾಯಧನ ಪಡೆದುಕೊಳ್ಳಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದ್ದು, ರೈತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಂಗಾಂಶ ಬಾಳೆ, ತರಕಾರಿ, ಹೂ ಬೆಳೆ, ಕಾಳುಮೆಣಸು ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ (Weed Mat) ಟ್ರ‍್ಯಾಕ್ಟರ್ (20 ಪಿಟಿಓ), ಕೃಷಿಹೊಂಡ, ಸಮಗ್ರ ಪೀಡೆ ನಿರ್ವಹಣೆ ಮತ್ತು ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ತಾಳೆ ಬೆಳೆ ಯೋಜನೆಯಡಿ ಪ್ರದೇಶ ವಿಸ್ತರಣೆ (ಸ್ವದೇಶಿ ಮತ್ತು ವಿದೇಶಿ ತಳಿಗಳು) ಅಂತರ ಬೆಳೆ, ತಾಳೆ ಹಣ್ಣು ಕೊಯ್ಯಲು ಸಹಾಯಧನ ಕಾರ್ಯಕ್ರಮಗಳಿಗೆ ಸಹಾಯಧನ ಕೋರಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹಣ್ಣಿನ ಬೆಳೆಗಳು, ತರಕಾರಿ ಮತ್ತು ತೋಟದ ಬೆಳೆಗಳಿಗೆ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಆಳವಡಿಸಿಕೊಳ್ಳಲು ಆಸಕ್ತ ರೈತರಿಂದ ಸಹಾಯಧನ ಕೋರಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಕಾಳುಮೆಣಸು ಪ್ರದೇಶ ವಿಸ್ತರಣೆ ಕೈಗೊಳ್ಳಲು ಆಸಕ್ತ ರೈತರಿಂದ ಸಹಾಯಧನ ಕೋರಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ವಿಸ್ತರಣೆ ಮತ್ತು ತರಬೇತಿ ಅಭಿಯಾನ ಯೋಜನೆಯಡಿ ಮತ್ತು ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಾಂತ್ರೀಕರಣ ಯೋಜನೆಯಡಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ, ತೆಂಗಿನ ಮರ ಹತ್ತುವ ಯಂತ್ರ, ಕಳೆ ಕೊಚ್ಚುವ ಯಂತ್ರ, ಟ್ರ‍್ಯಾಕ್ಟರ್ ಟ್ರೈಲರ್ ಮತ್ತು ಇನ್ನಿತರೆ ಯಂತ್ರೋಪಕರಣಗಳಿಗೆ ಸಹಾಯಧನ ನೀಡಲು ಆಸಕ್ತ ರೈತರಿಂದ ಸಹಾಯಧನ ಕೋರಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Shikaripura Horticulture Department ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೀರು ಸಂಗ್ರಹಣಾ ಘಟಕ, ಪ್ಲಾಸ್ಟಿಕ್ ಕ್ರೇಟ್ಸ್, ಸೋಲಾರ್ ಪಂಪ್‌ಸೆಟ್ ಅಳವಡಿಸಿಕೊಳ್ಳಲು ಆಸಕ್ತ ರೈತರಿಂದ ಸಹಾಯಧನ ಕೋರಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಲ್ಲಿಸಲು ದಿನಾಂಕ: 16/06/2025 ಕೊನೆಯ ದಿನಾಂಕ ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಮತ್ತು ಶಿಕಾರಿಪುರ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...