Thursday, June 25, 2026
Thursday, June 25, 2026

S.N. Chennabasappa ಓಲೈಕೆಯ ಪಿತಾಮಹ ‘ಖಾನ್’ಗ್ರೆಸ್! ತನ್ನ ‘ಖಾನ್’ದಾನಿನ ಬೆಂಕಿ ಆರಿಸಲು ನಮ್ಮ ಹಿಂದೂ ಸಮಾಜಕ್ಕೆ ಬೆಂಕಿ ಹಚ್ಚುತ್ತಿರುವುದು ರಾಜಕೀಯ ದುರುದ್ದೇಶಗಳ ಪ್ರತಿಬಿಂಬ : ಎಸ್.ಎನ್ ಚನ್ನಬಸಪ್ಪ

Date:

S.N. Chennabasappa ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಇತ್ತೀಚೆಗೆ ನಡೆದ ಸರಣಿ ಹತ್ಯಾಕಾಂಡಗಳನ್ನು ಹಾಗೂ ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ತಡೆಯುವಲ್ಲಿ ವಿಫಲವಾಗಿ ತನ್ನ ವೋಟ್ ಬ್ಯಾಂಕಿನ ಆಕ್ರೋಶವನ್ನು ನಿರ್ವಹಿಸಲು ರಾಜ್ಯ ಕಾಂಗ್ರೆಸ್‌ ಸರ್ಕಾರವು ಸಂಘ ಪರಿವಾರ ಮತ್ತು ಹಿಂದೂ ಸಂಘಟನೆಗಳ ಪ್ರಮುಖರ ಮೇಲೆ ಕೋಮುವಾದಿಗಳು ಎಂಬ ಪಟ್ಟ ಕಟ್ಟಿ ಅವರ ಮೇಲೆ ನಿರಾಧಾರ ಆರೋಪಗಳನ್ನು ಹೊರಿಸುತ್ತಿರುವುದು ರಾಜಕೀಯ ಪ್ರೇರಿತ ನಡೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್. ಚನ್ನಬಸಪ್ಪನವರು ತಿಳಿಸಿದ್ದಾರೆ.

ಅಧಿಕಾರವನ್ನು ಹಾಗೂ ಪೊಲೀಸ್ ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡು ಹಿಂದೂ ಮುಖಂಡರ ಹಳೆಯ ಭಾಷಣಗಳ ವಿರುದ್ಧ ಪ್ರಕರಣ ದಾಖಲಿಸಿರುವುದು ತುಘಲಕ್ ಆಡಳಿತಕ್ಕೆ ಉದಾಹರಣೆಯಾಗಿದೆ.ಆರ್ ಎಸ್ ಎಸ್ ಪ್ರಮುಖರಾದ ಶ್ರೀ ಕಲ್ಲಡ್ಕ ಪ್ರಭಾಕರ ಭಟ್ ಅವರ ದಶಕಗಳ ಹಿಂದಿನ ಭಾಷಣಗಳನ್ನು ಉಲ್ಲೇಖಿಸಿ ಎಫ್‌ಐಆರ್‌ ದಾಖಲಿಸಿರುವುದು, ಮತ್ತು ಬಿಜೆಪಿ ಮುಖಂಡರಾದ ಶ್ರೀ ಅರುಣ್‌ ಕುಮಾರ್ ಪುತ್ತಿಲ ಅವರಿಗೆ ಗಡಿಪಾರು ನೋಟಿಸ್‌ ನೀಡಿರುವುದು, ಸ್ಥಳೀಯ ಶಾಸಕರ, ಸಚಿವರ ಓಲೈಕೆಯ ರಾಜಕೀಯ ಒತ್ತಡಕ್ಕೆ ಮಣಿದಿರುವುದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ.

S.N. Chennabasappa ಇದೆಲ್ಲದರ ಮಧ್ಯೆ, ಸುಹಾಸ್ ಶೆಟ್ಟಿ ಅವರ ಹತ್ಯೆಯಾದಾಗ ನಡೆಯದ ತನಿಖೆಗಳು, ಅಬ್ದುಲ್ ರಹೀಮ್ ಕೊಲೆಯಾದಾಗ ರಾತೋರಾತ್ರಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮನೆಗಳಲ್ಲಿ ತನಿಖೆಗಳು ನಡೆಯುತ್ತಿದೆ. ಇದು ಕೇವಲ ಹಿಂದೂ ಸಂಘಟನೆಗಳ ಪ್ರಮುಖರ, ಕಾರ್ಯಕರ್ತರ ವಿರುದ್ಧ ನಡೆಯುತ್ತಿರುವುದು ಸಂವಿಧಾನಬದ್ಧ ತನಿಖೆಗಳಲ್ಲ; ಬದಲಾಗಿ ಮುಸಲ್ಮಾನರ ತೃಪ್ತಿಗಾಗಿ ನಡೆಯುತ್ತಿರುವುದು. ನಮ್ಮ ಸಂಘಪರಿವಾರದ ಪ್ರಮುಖರು ಮತ್ತು ಹಿಂದೂ ಸಮಾಜದ ನಾಯಕರನ್ನು ಗುರಿಯಾಗಿಸಿ ದೌರ್ಜನ್ಯ ನಡೆಸುವುದು ದೇಶದ ಸಾಂವಿಧಾನಿಕ ಬುನಾದಿಗೆ ಮಾಡುವ ಅಪಮಾನ. ರಾಜಕೀಯ ಹಾಗೂ ಓಲೈಕೆಗಾಗಿ ಹಿಂದೂ ಮುಖಂಡರನ್ನು ಗುರಿಯಾಗಿಸುವ ಈ ಕ್ರಮಗಳು ತಕ್ಷಣವೇ ನಿಲ್ಲಿಸಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಆಗುವ ಎಲ್ಲಾ ಅನಾಹುತಕ್ಕೆ ನಿಮ್ಮ ಓಲೈಕೆಯೇ ಕಾರಣವಾಗಲಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...