Monday, August 10, 2026
Monday, August 10, 2026

Shivamogga Multipurpose Social Service Society ವಿದ್ಯಾರ್ಥಿಗಳು ಪರಿಸರದ ಕಾಳಜಿ ಬೆಳೆಸಿಕೊಳ್ಳಬೇಕು: ಕವಿತಾ

Date:

Shivamogga Multipurpose Social Service Society ವಿದ್ಯಾರ್ಥಿಗಳು ಪರಿಸರದ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದು ಅಸಂಘಟಿತ ಕೂಲಿ ಕಾರ್ಮಿಕರ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಕವಿತಾ ಥೋರತ್ ಹೇಳಿದರು.
ಅವರು ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವೀಸ್ ಸೊಸೈಟಿಯಿಂದ ಆಯನೂರಿನ ಮಂಡಘಟ್ಟ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಚೈತ್ರದ ಚಿಗುರು ಮತ್ತು ಪರಿಸರ ದಿನಾಚರಣೆ ಕಾರ್ಯಕ್ರಮಲ್ಲಿ ಮಾತನಾಡಿದರು.
ಪರಿಸರವನ್ನು ಉಳಿಸಿದರೆ ನಾವು ಉಳಿಯುತ್ತೇವೆ. ಆದ್ದರಿಂದ ಪರಿಸರವನ್ನು ನಾಶಮಾಡದೇ ಪರಿಸರ ಉಳಿವಿಗಾಗಿ ಪ್ರತಿಯೊಬ್ಬರು ಜಾಗೃತರಾಗಬೇಕು. ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಪರಿಸರ ನಾಶವಾಗುತ್ತದೆ. ಪ್ಲಾಸ್ಟಿಕ್‌ನಿಂದ ಪ್ರಾಣಿ ಸಂಕುಲದ ಮೇಲೂ ಪರಿಣಾಮ ಬೀರುತ್ತಿದೆ. ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಿರುವಂತೆ ಮಕ್ಕಳಲ್ಲಿ ಅರಿವು ಮೂಡಿಸಿದರು.
Shivamogga Multipurpose Social Service Society ಹಸರೀಕರಣಕ್ಕೆ ಆದ್ಯತೆ ಕೊಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮುಂದಿನ ಪೀಳಿಗೆಗೂ ಪರಿಸರ ಉಳಿಯಬೇಕು. ಪ್ರಾಣಿ, ಪಕ್ಷಿಗಳು ನಮ್ಮೊಂದಿಗೆ ಜೀವಿಸುತ್ತವೆ. ನಮ್ಮ ರಾಜ್ಯದಲ್ಲಿ ಪರಿಸರ ಎಂದರೆ ತಕ್ಷಣ ನೆನಪಾಗುವ ಹೆಸರು ಸಾಲುಮರದ ತಿಮ್ಮಕ್ಕ. ನೂರಾರು ಸಸಿಗಳನ್ನು ನೆಟ್ಟು ಪರಿಸರಕ್ಕೆ ಕೊಡುಗೆ ನೀಡಿರುವ ತಿಮ್ಮಕ್ಕ, ತಾವು ನೆಟ್ಟ ಸಾಲು ಸಸಿಗಳಿಂದಲೇ ಸಾಲು ಮರದ ತಿಮ್ಮಕ್ಕ ಎಂಬ ಹೆಸರು ಪಡೆದುಕೊಂಡರು ಎಂದರು.
ಕಾರ್ಯಕ್ರಮದಲ್ಲಿ ಫಾದರ್ ಡಿಸೋಜ, ಸೊಸೈಟಿಯ ಕುಮುದ, ಜಗದೀಶ್, ವಸೂದ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...