Sunday, December 7, 2025
Sunday, December 7, 2025

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

Date:

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯನವರು ಸಭೆ ನಡೆಸಿ ಸಲಹೆ ಸೂಚನೆ ನೀಡಿದರು. ಈ ಸಭೆಯ ಮುಖ್ಯಾಂಶಗಳು:

  • ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು.
  • ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ ತಿಂಗಳು ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸುತ್ತಿದ್ದೇವೆ.
  • ಕಳೆದ 10 ದಿನಗಳಲ್ಲಿ 5 ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ. ಒಂದು ಪ್ರಕರಣದ ಆಡಿಟ್ ವರದಿ ಬರಬೇಕಾಗಿದೆ.
  • ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂಬ ಸೂಚನೆ ನೀಡಲಾಗಿದೆ.
  • ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.
  • ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...