Karnataka Maratha Communities Development Corporation Limited ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿಗೆ ಹಿಂದುಳಿದ ವರ್ಗಗಳ ಜನರಿಗೆ ವಿವಿಧ ಯೋಜನೆಗಳಾದ ಶಹಾಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು ಶೈಕ್ಷಣಿಕ ಸಾಲ ಯೋಜನೆ, (ಅರಿವು ಶೈಕ್ಷಣಕ ಸಾಲ ಯೋಜನೆ ನವೀಕರಣ), ಶಾಹುಮಹಾರಾಜ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ (ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ), ಮರಾಠ ಮಿಲ್ಟ್ರೀ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವ್ಯಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಿಗೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯಿತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮತ್ತು ಇದರ ಉಪ ಸಮುದಾಯಗಳನ್ನು ಹೊರತು ಪಡಿಸಿ) ಮರಾಠ ಸಮುದಾಯದ ಜನರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
Karnataka Maratha Communities Development Corporation Limited ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡಿಂಗ್ ಮಾಡಿಸಿರಬೇಕು. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯ ಬಯಸುವವರೂ ಸಹ ಆನ್ ಲೈನ್ ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು. 2023-24 ಮತ್ತು 2024-25 ನೇ ಸಾಲಿನ ನಿಗದಿತ ಯೋಜನೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಈ ವರ್ಷ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಎಲ್ಲಾ ಯೋಜನೆಗಳಿಗೆ ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಜುಲೈ 4 ರೊಳಗಾಗಿ ಸಲ್ಲಿಸುವುದು. (ಶೈಕ್ಷಣಿಕ ಸಾಲ ಯೋಜನೆಗೆ ಕೊನೆಯ ದಿನಾಂಕ ಇರುವುದಿಲ್ಲ).
ಹೆಚ್ಚಿನ ಮಾಹಿತಿಗಾಗಿ https://kmcdc.karnataka.gov.in ಹಾಗೂ ನಿಗಮದ ಸಹಾಯವಾಣಿ ಮೊ.ನಂ. 8867537799 ದೂ.ಸಂ.080-29903994 ಗಳನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಡಾ. ಪ್ರಕಾಶ್ ಆರ್ ಪಾಗೋಜಿ ತಿಳಿಸಿದ್ದಾರೆ.
Karnataka Maratha Communities Development Corporation Limited ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
Date:
