Thursday, March 19, 2026
Thursday, March 19, 2026

Rotary Shivamogga ಆರ್ಥಿಕ ಪ್ರಗತಿ ಸಾಧಿಸುವಲ್ಲಿ ಚಿಟ್ ಫಂಡ್ ಉದ್ಯಮದ ಕೊಡುಗೆ ಅಪಾರ

Date:

Rotary Shivamogga ದೇಶ ಆರ್ಥಿಕವಾಗಿ ಪ್ರಗತಿ ಸಾಧಿಸುವಲ್ಲಿ ಚಿಟ್ ಫಂಡ್ ಉದ್ಯಮದ ಕೊಡುಗೆ ಅಪಾರವಾಗಿದೆ ಎಂದು ಸಹ್ಯಾದ್ರಿ ಚಿಟ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಮೇಶ್ ಭಟ್ ಹೇಳಿದರು.

ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಿಟ್ ಫಂಡ್ ಉದ್ಯಮದ ಕುರಿತು ಮಾತನಾಡಿ, ಜಿಎಸ್‌ಟಿ ತೆರಿಗೆ ರೂಪದಲ್ಲಿ ಹಾಗೂ ಆದಾಯ ತೆರಿಗೆ ರೂಪದಲ್ಲಿ ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿಗಳನ್ನು ಸರ್ಕಾರಕ್ಕೆ ಪಾವತಿಸುತ್ತಿದೆ. ಆರ್ಥಿಕ ದುರ್ಬಲರಿಗೆ, ಶ್ರೀಸಾಮಾನ್ಯರಿಗೆ, ನೌಕರರಿಗೆ ಹಾಗೂ ಉದ್ಯಮಿಗಳಿಗೆ ಚಿಟ್ ಫಂಡ್ ನಿಂದ ತುಂಬಾ ಅನುಕೂಲಕರವಾಗಿದೆ. ಲಕ್ಷಾಂತರ ಜನರಿಗೆ ಉದ್ಯೋಗ ಅವಕಾಶವನ್ನು ನೀಡಿದೆ ಎಂದು ತಿಳಿಸಿದರು.

ಸಹ್ಯಾದ್ರಿ ಚಿಟ್ಸ್ ಸಂಸ್ಥೆಯ ಮಾರುಕಟ್ಟೆ ನಿರ್ದೇಶಕ ಶಿವರಾಜ್ ಉಡುಗಣಿ ಮಾತನಾಡಿ, ಚಿಟ್ ಫಂಡ್ ಹೇಗೆ ನಡೆಯುತ್ತದೆ ಮತ್ತು ಇದರಿಂದ ಆಗುವ ಉಪಯೋಗಗಳ ಬಗ್ಗೆ ವಿವರವಾದ ಮಾಹಿತಿಯನ್ನು ಮತ್ತು ರಿಜಿಸ್ಟರ್ ಚಿಟ್ ಫಂಡ್ ಗಳಿಗೂ ಹಾಗೂ ಅನ್ ರಿಜಿಸ್ಟರ್ ಫಂಡ್ ಗಳಿಗೂ ಇರುವ ವ್ಯತ್ಯಾಸಗಳ ಬಗ್ಗೆ ವಿವರಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಸದಸ್ಯರ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡಿದರು. ಚಿಟ್ ಫಂಡ್ ಉಪಯೋಗಗಳ ಮಾಹಿತಿಯನ್ನು ಯುವ ಜನತೆಗೆ ಹಂಚಲು ಕೋರಿದರು.

Rotary Shivamogga ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಅರುಣ್ ದೀಕ್ಷಿತ್ ಮಾತನಾಡಿ, ನೋಂದಾಯಿತ ಚಿಟ್ ಫಂಡ್ ಸಂಸ್ಥೆಗಳಲ್ಲಿ ಸಿಗುವ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮದಲ್ಲಿ ಯಶಸ್ಸು ಸಾಧಿಸಬೇಕು. ಸರಿಯಾದ ಮಾಹಿತಿಯನ್ನು ಪರಿಣಿತರಿಂದ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಶಶಿಕಾಂತ್ ನಾಡಿಗ್, ಜಿ.ವಿಜಯಕುಮಾರ್, ವಸಂತ ಹೋಬಳಿದಾರ್, ನಾಗರಾಜ್ ಹಾಗೂ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...