Monday, December 15, 2025
Monday, December 15, 2025

Department of Youth Empowerment and Sports ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Date:

Department of Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯ ಯುವನೀತಿ 2012 ಅನುಷ್ಠಾನದಡಿಯಲ್ಲಿ ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು ಮತ್ತೊಮ್ಮೆ ಜಾರಿಗೆ ತರಲಾಗಿದ್ದು, ಆಸಕ್ತ ಶಾಲೆಗಳಿಂದ ಪ್ರಸ್ತಾವನೆ/ ಅರ್ಜಿ ಆಹ್ವಾನಿಸಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಕೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹವಾಗಿ ತಲಾ ರೂ. 1.00 ಲಕ್ಷದಂತೆ ಸರ್ಕಾರದಿಂದ ಪ್ರೋತ್ಸಾಹಧನವನ್ನು ನೀಡಲು ತೀರ್ಮಾನಿಸಿದ್ದು, ಈ ಅನುದಾನದಲ್ಲಿ ರೂ. 10,000/-ಗಳನ್ನು ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ಮತ್ತು ರೂ. 90,000/-ಗಳನ್ನು ಶಾಲೆಯ ಎಸ್.ಡಿ.ಎಂ.ಸಿ.ಗೆ ಅಗತ್ಯ ಕ್ರೀಡಾ ಸಾಮಗ್ರಿಗಳ ಖರೀದಿಸಬೇಕಾಗಿರುತ್ತದೆ.
Department of Youth Empowerment and Sports ಆಸಕ್ತ ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಶಾಲೆಗಳು 2024-25ನೇ ಸಾಲಿನ ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿರುವ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳನ್ನು ಹೊಂದಿದ ಜಿಲ್ಲೆಯ ಸರ್ಕಾರಿ ಶಾಲೆಯವರು ಪ್ರಸ್ತಾವನೆಯನ್ನು ಜೂ. 25 ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಶಿವಮೊಗ್ಗ ಸಲ್ಲಿಸುವಂತೆ ಇಲಾಖೆ ಸಹಾಯಕ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9900280416 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...