Monday, August 10, 2026
Monday, August 10, 2026

Department of Youth Empowerment and Sports ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Date:

Department of Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯ ಯುವನೀತಿ 2012 ಅನುಷ್ಠಾನದಡಿಯಲ್ಲಿ ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು ಮತ್ತೊಮ್ಮೆ ಜಾರಿಗೆ ತರಲಾಗಿದ್ದು, ಆಸಕ್ತ ಶಾಲೆಗಳಿಂದ ಪ್ರಸ್ತಾವನೆ/ ಅರ್ಜಿ ಆಹ್ವಾನಿಸಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಕೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹವಾಗಿ ತಲಾ ರೂ. 1.00 ಲಕ್ಷದಂತೆ ಸರ್ಕಾರದಿಂದ ಪ್ರೋತ್ಸಾಹಧನವನ್ನು ನೀಡಲು ತೀರ್ಮಾನಿಸಿದ್ದು, ಈ ಅನುದಾನದಲ್ಲಿ ರೂ. 10,000/-ಗಳನ್ನು ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ಮತ್ತು ರೂ. 90,000/-ಗಳನ್ನು ಶಾಲೆಯ ಎಸ್.ಡಿ.ಎಂ.ಸಿ.ಗೆ ಅಗತ್ಯ ಕ್ರೀಡಾ ಸಾಮಗ್ರಿಗಳ ಖರೀದಿಸಬೇಕಾಗಿರುತ್ತದೆ.
Department of Youth Empowerment and Sports ಆಸಕ್ತ ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಶಾಲೆಗಳು 2024-25ನೇ ಸಾಲಿನ ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿರುವ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳನ್ನು ಹೊಂದಿದ ಜಿಲ್ಲೆಯ ಸರ್ಕಾರಿ ಶಾಲೆಯವರು ಪ್ರಸ್ತಾವನೆಯನ್ನು ಜೂ. 25 ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಶಿವಮೊಗ್ಗ ಸಲ್ಲಿಸುವಂತೆ ಇಲಾಖೆ ಸಹಾಯಕ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9900280416 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...