Sunday, August 2, 2026
Sunday, August 2, 2026

International Yoga Day ಯೋಗವು ಜೀವನಕ್ಕೆ ಸಂಜೀವಿನಿ ಇದ್ದಂತೆ”- ಶಿಕ್ಷಕ ಕಬ್ಬೂರ

Date:

International Yoga Day “ಯೋಗವೆಂದರೆ ಅದು ಕೇವಲ ವ್ಯಾಯಾಮವಲ್ಲ, ಅದೊಂದು ಸಂಜೀವಿನಿ, ಯೋಗವು ದೇಹ ಮತ್ತು ಆತ್ಮದೊಂದಿಗೆ ಮನಸ್ಸನ್ನು ಏಕೀಕರಿಸುವ ಸಾಧನವಾಗಿದ್ದು, ಅದು ನಮ್ಮ ದೇಹ ಮತ್ತು ಪ್ರಜ್ಞೆಯನ್ನು ಒಗ್ಗುಡಿಸುತ್ತದೆ, ಆದ್ದರಿಂದ ಇಂದಿನ ಜಗತ್ತಿನಲ್ಲಿ ಸಾಮರಸ್ಯ ಮತ್ತು ವಿಶ್ವ ಶಾಂತಿಗಾಗಿ ಯೋಗವು ಅತೀ ಅವಶ್ಯಕವಾಗಿದೆ. ಯೋಗದಿಂದ ನಾಮ್ಮ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ಆರೋಗ್ಯದಲ್ಲಿ ಸುಧಾರಣೆ ಸಾಧ್ಯ, ಯೋಗವು ಭಾರತೀಯ ಸಂಸ್ಕೃತಿಯ ಪ್ರತೀಕ ಎಂಬುದು ನಮ್ಮ ಹೆಮ್ಮೆ” ಎಂದು ಶಿಕ್ಷಕ ಹಾಗೂ ನೌಕರ ಸಂಘದ ಕಾರ್ಯದರ್ಶಿ ಎನ್.ಎನ್.ಕಬ್ಬೂರ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪಟ್ಟಣದ ಸ.ಕಿ.ಪ್ರಾ ಕನ್ನಡ ಶಾಲೆ ನಂ-6 ರಲ್ಲಿ “ಅಂತರರಾಷ್ಟ್ರೀಯ ಯೋಗ ದಿನಾಚರಣೆ”ಯಲ್ಲಿ ಮಾತನಾಡಿದ ಅವರು ಯೋಗದಲ್ಲಿನ ನಿಂತು ಮಾಡುವ ಆಸನಗಳು, ಕುಳಿತು ಮಾಡುವ ಆಸನಗಳು, ಮಲಗಿ ಮಾಡುವ ಆಸನಗಳು, ಪ್ರಾಣಾಯಾಮ, ಧ್ಯಾನಗಳ ಮಹತ್ವ ಮತ್ತು ಪ್ರಾಮುಖ್ಯತೆಯ ಬಗ್ಗೆ ಮಾಹಿತಿ ನೀಡಿದರು.

ನಂತರ ಕೇಲವು ಆಸನಗಳನ್ನು ಮಕ್ಕಳಿಂದ ಪ್ರಾಯೋಗಿಕವಾಗಿ ಮಾಡಿಸಲಾಯಿತು. ಈ ವೇಳೆ ಶಿಕ್ಷಕಿ ಎಮ್.ಆರ್.ಫಂಡಿ, ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಿಬ್ಬಂದಿಯವರು, ಪಾಲಕ-ಪೋಷಕರು ಮತ್ತು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...