Thursday, March 19, 2026
Thursday, March 19, 2026

Department of Horticulture ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Date:

Department of Horticulture ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ವಿವಿಧ ಯೋಜನೆಯಡಿ ಸಹಾಯಧನ ಪಡೆದುಕೊಳ್ಳಲು ಆಸಕ್ತ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕಂದು ಬಾಳೆ, ಅಂಗಾಂಶ ಬಾಳೆ, ತರಕಾರಿ, ಕಾಳು ಮೆಣಸು, ಗೋಡಂಬಿ, ಹೂವಿನ ಬೆಳೆಗಳ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ (weed Mat) , ಮಿನಿ ಟ್ರಾಕ್ಟರ್ (up to 20 pto hp), ಫಾರಂ ಗೇಟ್, ಪ್ರಾಥಮಿಕ ಸಂಸ್ಕರಣಾ ಘಟಕ, ಪ್ಯಾಕ್ ಹೌಸ್, ಸಮಗ್ರ ಪೀಡೆ ನಿರ್ವಹಣೆ ಮತ್ತು ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ. ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆ ಬೆಳೆ ಯೋಜನೆಯಡಿ ಪ್ರದೇಶ ವಿಸ್ತರಣೆ (ಸ್ವದೇಶಿ ಮತ್ತು ವಿದೇಶಿ ತಳಿಗಳು) ಅಂತರ ಬೆಳೆ, ತಾಳೆ ಹಣ್ಣು ಕ್ಯೊಯಲು ಸಹಾಯ ಧನ. ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹಣ್ಣಿನ ಬೆಳೆಗಳು, ತರಕಾರಿ ಮತ್ತು ತೋಟದ ಬೆಳೆಗಳಿಗೆ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಕೆ. ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಕಾಳುಮೆಣಸು ಪ್ರದೇಶ ವಿಸ್ತರಣೆ, ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ವಿಸ್ತರಣೆ ಮತ್ತು ತರಬೇತಿ ಅಭಿಯಾನ ಯೋಜನೆಯಡಿ ಮತ್ತು ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಾಂತ್ರೀಕರಣ ಯೋಜನೆಯಡಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ, ತೆಂಗಿನ ಮರ ಹತ್ತುವ ಯಂತ್ರ, ಕಳೆ ಕೊಚ್ಚುವ ಯಂತ್ರ, ಟ್ರಾಕ್ಟರ್ ಟ್ರೈಲರ್ ಮತ್ತು ಇನ್ನಿತರ ಯಂತ್ರೋಪಕರಣಗಳಿಗೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಪ್ಲಾಸ್ಟಿಕ್ ಕ್ರೇಟ್, ಹಣ್ಣು ಮಾಗಿಸುವ ಘಟಕ, ಸೋಲಾರ್ ಪಂಪ್ ಸೇಟ್, ಲಘು ಪೋಷಕಾಂಶಗಳ ಮಿಶ್ರಣ / ಬೆಳೆ ಸ್ಪೇಷಲ್ ಸಹಾಯಧನ, ರಾಜ್ಯವಲಯ ಯೋಜನೆ ಹಾಗೂ ಜಿಲ್ಲಾ ಪಂಚಾಯತ್ ಯೋಜನೆ ವತಿಯಿಂದ ಜೇನು ಪೆಟ್ಟಿಗೆ ಸ್ಟ್ಯಾಂಡ್ ಹಾಗೂ ಜೇನು ಕುಟುಂಬಕ್ಕೆ ಸಹಾಯಧನ ಪಡೆದುಕೊಳ್ಳುವುದು.
Department of Horticulture ಆಸಕ್ತ ರೈತರು ಅರ್ಜಿಯನ್ನು ಆಯಾ ರೈತ ಸಂಪರ್ಕ ಕೇಂದ್ರದಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 5 ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿ.ಪಂ. ಭದ್ರಾವತಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಮತ್ತು ಭದ್ರಾವತಿ ತೋಟಗಾರಿಕೆ ಕಛೇರಿ ಹಾಗೂ ದೂ.ಸಂ. 08282-295029 ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...