Wednesday, July 8, 2026
Wednesday, July 8, 2026

Kempe Gowda ಜೂನ್ 27. ನಾಡಪ್ರಭು ಕೆಂಪೇಗೌಡ ಜಯಂತಿ.ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

Date:

Kempe Gowda ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಜೂ.27 ರ ಬೆಳಿಗ್ಗೆ 10.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯನ್ನು ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು. ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ವಿಶೇಷ ಆಹ್ವಾನಿತರಾಗಿ ಆಗಮಿಸವರು.
Kempe Gowda ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ಪ್ರಾಧಿಕಾರ, ನಿಗಮ, ಮಂಡಳಿಗಳ ಅಧ್ಯಕ್ಷರು, ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷರು, ತಾಲ್ಲೂಕು ಒಕ್ಕಲಿಗ ಸಂಘದ ಅಧ್ಯಕ್ಷರು ಪಾಲ್ಗೊಳ್ಳುವರು.
ಡಿವಿಎಸ್ ಕಲಾ ಮತ್ತು ವಿಜ್ಞಾನ ಕಾಲೇಜು ನಿವೃತ್ತ ಕನ್ನಡ ಪ್ರಾಧ್ಯಾಪಕರು ಹಾಗೂ ಪ್ರಾಂಶುಪಾಲರಾದ ಡಾ.ಎಚ್.ಟಿ.ಕೃಷ್ಣಮೂರ್ತಿ ವಿಶೇಷ ಉಪನ್ಯಾಸ ನೀಡುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...