Forest Department ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣವಾದ ಎತ್ತಿನಭುಜ ಚಾರಣವನ್ನು ಜುಲೈ 31ರ ವರೆಗೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಮಳೆಯಾಗುತ್ತಿರುವುದರಿಂದ ಹಾಗೂ ದಟ್ಟವಾಗಿ ಮಂಜು ಕವಿಯುತ್ತಿರುವುದರಿಂದ ಪ್ರವಾಸಿಗರು ಅಪಾಯಕ್ಕೆ ಒಳಗಾಗುವ ಸಾಧ್ಯತೆಗಳು ಇರುತ್ತವೆ ಎಂದು ಅರಣ್ಯ ಇಲಾಖೆ ತಿಳಿಸಿದೆ.
