Thursday, September 17, 2026
Thursday, September 17, 2026

All India Radio Bhadravati ಭದ್ರಾವತಿ ಬಾನುಲಿಯಲ್ಲಿ ಯುವಜನರಿಗಾಗಿ “ಗೆಲುವಿನ ಗುಟ್ಟು” ಕಾರ್ಯಕ್ರಮ ಸರಣಿ

Date:

All India Radio Bhadravati ಯುವಜನರಲ್ಲಿ ಆತ್ಮಸ್ಥೈರ್ಯ ಕುಂದುತ್ತಿರುವ ಹಿನ್ನಲೆಯಲ್ಲಿ ಅವರಿಗೆ ಆತ್ಮಸ್ಥೈರ್ಯ ತುಂಬಲು ಹಾಗು ನೆಮ್ಮದಿಯ ಜೀವನ ಕಟ್ಟಿಕೊಳ್ಳಲು ಮಾರ್ಗದರ್ಶನ ನೀಡುವ ವಿಶೇಷ ಕಾರ್ಯಕ್ರಮ ಸರಣಿ “ಗೆಲುವಿನ ಗುಟ್ಟು” ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಪ್ರತಿ ಶುಕ್ರವಾರ ಬೆಳಿಗ್ಗೆ 09:05ರಿಂದ 09:20ರವರೆಗೆ ಪ್ರಸಾರವಾಗಲಿದೆ.

ಈ ಸರಣಿಯಲ್ಲಿ ವಿವಿಧ ವಿಭಾಗದಲ್ಲಿ ನೈಪುಣ್ಯತೆ ಪಡೆಯುವ ವಿಧಾನ, ಕೌಶಲ್ಯದ ಅವಶ್ಯಕತೆ ಹಾಗೂ ಪಡೆಯುವ ವಿಧಾನ ಮತ್ತು ಜೀವನದಲ್ಲಿ ಯಶಸ್ಸನ್ನು ಪಡೆದ ಹಲವು ಗಣ್ಯರ ಯಶೋಗಾಥೆ ಪ್ರಸಾರವಾಗಲಿದ್ದು ಶಿವಮೊಗ್ಗದ ಪಿ.ಇ.ಎಸ್ ಸಂಸ್ಥೆಯ 52 ವಿಷಯ ಪರಿಣಿತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ.

All India Radio Bhadravati ಪಿ.ಇ.ಎಸ್ ಸಹಯೋಗದಲ್ಲಿ ಪ್ರಸಾರವಾಗುತ್ತಿರುವ ಈ ಕಾರ್ಯಕ್ರಮ ಸರಣಿಯನ್ನು ಸಾರ್ವಜನಿಕರು ಉಪಯೋಗ ಪಡೆಯಬೇಕೆಂದು ಭದ್ರಾವತಿ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್.ಭಟ್ ಹಾಗು ಪಿ.ಇ.ಎಸ್ ಸಂಸ್ಥೆಯ ಮುಖ್ಯ ಆಡಳಿತ ಸಂಯೋಜಕರಾದ ಡಾ. ನಾಗರಾಜ್ ಆರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...