Thursday, March 19, 2026
Thursday, March 19, 2026

Shivamogga Police ಶಿವಮೊಗ್ಗ ನಗರದ ಉಷಾ ವೃತ್ತದಲ್ಲಿ ತಾತ್ಕಾಲಿಕ ಟ್ರಾಫಿಕ್ ಸಿಗ್ನಲ್ ಅಳವಡಿಕೆ

Date:

Shivamogga Police ಶಿವಮೊಗ್ಗ ನಗರದ ಉಷಾ ವೃತ್ತದಲ್ಲಿ, ಹೆಚ್ಚಿನ ವಾಹನಗಳು ಸಂಚರಿಸುತ್ತಿದ್ದು ಹಾಗೂ ಸದರಿ ಸ್ಥಳದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸದೇ ಇದ್ದ ಕಾರಣ ವಾಹನ ದಟ್ಟಣೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ತಾತ್ಕಾಲಿಕ ಟ್ರಾಫಿಕ್ ಸಿಗ್ನಲ್ ಲೈಟ್ ಅನ್ನು ಅಳವಡಿಸುತ್ತಿದ್ದು, ಈ ದಿನ ದಿನಾಂಕಃ 16-07-2025 ರಂದು ಶ್ರೀ ಮಿಥುನ್ ಕುಮಾರ್ ಜಿ. ಕೆ. ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಟ್ರಾಫಿಕ್ ಸಿಗ್ನಲ್ ಗೆ ಚಾಲನೆ ನೀಡಿ, ಈ ಕೆಳಕಂಡಂತೆ ಮಾತನಾಡಿರುತ್ತಾರೆ.

1) ಸಂಚಾರ ದಟ್ಟಣೆಯ ನಿಯಂತ್ರಣದ ಸಂಬಂಧ ಉಷಾ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಅನ್ನು ಅಳವಡಿಸಲಾಗಿರುತ್ತದೆ.

2) ಈ ಸ್ಥಳದಲ್ಲಿ ಸಿಗ್ನಲ್ ಲೈಟ್ ನ ಅಳವಡಿಕೆಯ ಅವಶ್ಯಕತೆ ತುಂಬಾ ಇದ್ದು, ಸಾರ್ವಜನಿಕರು, ಜನಪ್ರತಿನಿಧಿಗಳು, ಮುಖಂಡರು ಗಳ ಸಹಾ ಸಿಗ್ನಲ್ ಲೈಟ್ ಅಳವಡಿಕೆ ಮಾಡುವಂತೆ ಕೋರಿಕೆ ಸಲ್ಲಿಸಿದ್ದು, ಈ ಸಂಬಂಧ ಟ್ರಾಫಿಕ್ ಲೈಟ್ ಅನ್ನು ಅಳವಡಿಕೆ ಮಾಡಲಾಗಿರುತ್ತದೆ.

3) ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಿದಾಗ ಒಳ್ಳೆಯ ಕೆಲಸವಾಗುತ್ತದೆ ಎಂಬುದಕ್ಕೆ, ಇದೇ ಒಂದು ಉತ್ತಮ ಉದಾಹರಣೆಯಾಗಿರುತ್ತದೆ.

4) ಸಾರ್ವಜನಿಕರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲನೆ ಮಾಡಿ, ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದಾರೆ, ಸಂಚಾರಿ ಟ್ರಾಫಿಕ್ ಸಿಗ್ನಲ್ ಇದೆ ಎಂದು ಮಾತ್ರ ನಿಮ್ಮ ಸುರಕ್ಷತೆಯ ದೃಷ್ಠಿಯಿಂದ ಸಂಚಾರ ನಿಯಮಗಳನ್ನು ಪಾಲನೆ ಮಾಡಿರಿ.

5) ನಿಮ್ಮ ಕುಟುಂಬ, ಸ್ನೇಹಿತರು, ಅವಲಂಬಿತರು ಮತ್ತು ನಿಮ್ಮ ಜೀವದ ಸುರಕ್ಷತೆಯ ಹಿನ್ನೆಲೆಯಲ್ಲಿ ಸಂಚಾರ ನಿಯಮ ಪಾಲನೆ ಅವಶ್ಯಕವಿರುತ್ತದೆ.

6)ಕೇವಲ ಸೀಟ್ ಬೆಲ್ಟ್, ಹೆಲ್ಮೇಟ್ ಧರಿಸುವುದರಿಂದಲೇ ಎಷ್ಟೋ ಬಾರಿ ಮಾರಣಾಂತಿಕ ಅಪಘಾತ ತಡೆದು, ಪ್ರಾಣವನ್ನು ರಕ್ಷಿಸಲು ಸಾಧ್ಯವಿರುತ್ತದೆ.

7) ಅಪಘಾತದಲ್ಲಿ ಹೆಚ್ಚಿನ ಸಂದರ್ಭ ಯುವಕರೇ ಪ್ರಾಣ ಕಳೆದುಕೊಳ್ಳುತ್ತಾರೆ, ಸಾಮಾನ್ಯ ಸಂಚಾರ ನಿಯಮಗಳನ್ನು ಪಾಲನೆ ಮಾಡದೇ ಇದ್ದ ಸಂದರ್ಭದಲ್ಲಿ ಈ ರೀತಿಯ ಸಣ್ಣ ಪುಟ್ಟ ಅಪಘಾತಗಳು ಸಹಾ ಮಾರಣಾಂತಿಕ ಅಪಘಾತಗಳಾಗಿ ಪರಿಣಮಿಸುತ್ತವೆ.

8) ಅಪಘಾತದಲ್ಲಿ ಕೇವಲ ಗಾಯಾಳುವಲ್ಲದೇ ಆತನ ಅವಲಂಬಿತರೂ ಸಹಾ ತೊಂದರೆಗೆ ಒಳಗಾಗುತ್ತಾರೆ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲನೆ ಮಾಡಿ. Shivamogga Police ದೇವರಾಜ್, ಸಿಪಿಐ ಶಿವಮೊಗ್ಗ ಸಂಚಾರ ವೃತ್ತ, ತಿರುಮಲೇಶ್, ಪಿಎಸ್ಐ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ, ನವೀನ್ ಎಂ, ಪಿಎಸ್ಐ ಶಿವಮೊಗ್ಗ ಪೂರ್ವ ಸಂಚಾರ ಪೊಲೀಸ್ ಠಾಣೆ ರವರು ಹಾಗೂ ಮುಖಂಡರುಗಳಾದ ಸಂತೋಷ್ ಬೆಳ್ಳಿಕೆರೆ, ಯೋಗೇಶ್, ಉದಯ್ ದಾಸ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...