ವಿಶೇಷ ಬರಹ
ಲೇ:ಆಕಾಶ್.ಆರ್ಎಸ್.
Klive Special Article ಸಾಗರ ತಾಲ್ಲೂಕಿನ ಕೆಳದಿ ಗ್ರಾಮದ ಶಿವಪ್ಪನಾಯಕರ ಕಾಲದಲ್ಲಿ ನಿರ್ಮಿಸಿದ್ದರೆನ್ನಲಾದ ಅತ್ಯಂತ ದೊಡ್ಡದಾದ ಹಿರೆಕೆರೆಯ ಹೂಳೆತ್ತುವ ಕಾಮಗಾರಿಯನ್ನು ನರೇಗಾ ಯೋಜನೆಯಡಿ ಕೈಗೊಳ್ಳುವ ಮೂಲಕ ಮಳೆಗಾಲದಲ್ಲಿ ಕೆರೆ ತುಂಬಲು ಮತ್ತು ಸುತ್ತಮುತ್ತಲ ಜಮೀನುಗಳಿಗೆ ಬೇಸಿಗೆ ಬೆಳೆಗೆ ಅನುಕೂಲ ಮಾಡಿಕೊಟ್ಟಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು ವಿವಿಧ ಕಾಮಗಾರಿಗಳ ಮೂಲಕ ಉದ್ಯೋಗ ಖಾತ್ರಿ ಪಡಿಸುವ ಮೂಲಕ ಗ್ರಾಮೀಣ ಭಾಗದ ಜನರ ಜೀವನೋಪಾಯಕ್ಕೆ ಆಸರೆಯಾಗಿದ್ದು ಬದುಕು ಹಸನುಗೊಳಿಸುತ್ತಾ ಬಂದಿದೆ.
ಸಾಗರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿನ ಕೆರೆಗಳನ್ನು ಹೂಳು ತೆಗೆದು ಕೆರೆ ಅಭಿವೃದ್ದಿಪಡಿಸುವ ಮೂಲಕ ಸುತ್ತಮುತ್ತಲಿನ ಜಮೀನುಗಳಿಗೆ ನೀರು ಒದಗಿಸಲು ಸಾಧ್ಯವಾಗಿಸಿದೆ ‘ನರೇಗಾ’.
ಕೆಳದಿ ಗ್ರಾಮದಲ್ಲಿ ಶಿವಪ್ಪನಾಯಕನ ಆಡಳಿತ ಅವಧಿಯಲ್ಲಿ ನಿರ್ಮಾಣವಾಗಿರುವ ಹಿರೆಕೆರೆ ಅತ್ಯಂತ ದೊಡ್ಡ ಕೆರೆಯಾಗಿದೆ. ಈ ಕೆರೆಯು ಸುಮಾರು 150 ಎಕರೆಯಷ್ಟು ವಿಸ್ತಿರ್ಣ ಹೊಂದಿದೆ. ಸುತ್ತಲೂ ಸುಮಾರು 200 ಎಕರೆ ಜಮೀನಿಗೆ ಈ ಕೆರೆಯ ನೀರೇ ಮೂಲವಾಗಿದೆ. ಈ ಕೆರೆಯಿಂದ ಕೆಳಭಾಗದಲ್ಲಿರುವ ಸಾಕಷ್ಟು ಜಮೀನುಗಳು ಕೃಷಿಗೆ ಈ ನೀರನ್ನೆ ಬಳಸುತ್ತಾರೆ.
ಇಲ್ಲಿನ ಬಹುತೇಕ ಜಮೀನಿನಲ್ಲಿ ಭತ್ತ ಮತ್ತು ಅಡಿಕೆ ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಹಿರೆಕೆರೆಯಿಂದ ಬರುವ ನೀರು ಮತ್ತು ಈ ಗ್ರಾಮದಲ್ಲಿರುವ ಕಾಲುವೆ ಅಕ್ಕಪಕ್ಕದ ಜಮೀನುಗಳಿಂದ ಬರುವ ನೀರು ಸಹ ಕಾಲುವೆ ಮೂಲಕ ಹರಿದು ಮುಂದೆ ನದಿ ಸೇರುತ್ತದೆ. ಆದರೆ ಕಾಲುವೆ ಹೂಳು ತುಂಬಿದ್ದರಿಂದ ಮಳೆಗಾಲದಲ್ಲಿ ಬರುವ ನೀರು ಸುತ್ತಲೂ ಇರುವ ಜಮೀನು ಮತ್ತು ತೋಟಗಳಿಗೆ ನುಗ್ಗಿ ಸಾಕಷ್ಟು ಹಾನಿಯುಂಟು ಮಾಡಿದ್ದು, ಇದರಿಂದ ಅಲ್ಲಿನ ರೈತರು ಕಂಗೆಟ್ಟಿದ್ದರು.
ನರೇಗಾ ಯೋಜನೆಯಡಿ ಕಾಲುವೆ ಹೂಳೆತ್ತುವ ಕಾರ್ಯವನ್ನು ಕೈಗೊಂಡಿದ್ದು, ಇದರಿಂದ ಸುಮಾರು 200 ಎಕರೆಯಷ್ಟು ಜಮೀನುಗಳಿಗೆ ಬೇಸಿಗೆ ಅವಧಿಯಲ್ಲಿ ನೀರು ಜಮೀನುಗಳಿಗೆ ಸರಾಗವಾಗಿ ಹರಿದು ಹೋಗಲು ಅನುಕೂಲಕರವಾಗಿದೆ. ಹಾಗೂ ಮಳೆಗಾಲದಲ್ಲಿ ಅತಿಯಾದ ಮಳೆಯಿಂದ ಕಾಲುವೆ ತುಂಬಿ ತೋಟ, ಗದ್ದೆಗಳಿಗೆ ನೀರು ನುಗ್ಗಿ ಗಿಡಗಳಿಗೆ ಹಾಕಿರುವ ಗೊಬ್ಬರ ಮತ್ತು ಮಣ್ಣನ್ನು ಕೊಚ್ಚಿಕೊಂಡು ಹೋಗುವ ಸಮಸ್ಯೆ ತಪ್ಪಿದೆ.
ಪ್ರತಿ ವರ್ಷ ಮಳೆಗಾಲ ಬಂದಾಗ ಜಮಿನುಗಳಲ್ಲಿರುವ ಬೆಳೆಗಳಿಗೆ ಯಾವ ರೀತಿ ಹಾನಿಯಾಗುತ್ತದೆ ಮತ್ತು ಏನು ನಷ್ಟ ಉಂಟು ಮಾಡುತ್ತದೆ ಎಂಬ ಭಯದಿಂದ ಕಾಲ ಕಳೆಯುತ್ತಿದ್ದೆವು. ಆದರೆ ಈ ವರ್ಷ ಕಾಲುವೆ ಹೂಳೆತ್ತಿ ಅಭಿವೃದ್ದಿಪಡಿಸಿರುವುದರಿಂದ ಚಿಂತೆ ಇಲ್ಲದೇ ಇದ್ದೇವೆ ಎಂದು ರೈತರಾದ ನಾರಾಯಣಪ್ಪ ಅವರು ಹೇಳಿದ್ದಾರೆ.
ಮಾಸೂರಿನಲ್ಲಿ ನೆಡುತೋಪುಗಳು:
ನರೇಗಾ ಯೋಜನೆಯಲ್ಲಿ ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ಮಾಸೂರಿನ ರಸ್ತೆ ಬದಿಗಳಲ್ಲಿ ಮತ್ತು ಸಾರ್ವಜನಿಕ ಪ್ರದೇಶಗಳ ಸುತ್ತಲೂ ಗಿಡಗಳನ್ನು ನೆಟ್ಟು, ಬೆಳೆಸಿ ಪೋಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನರೇಗಾ ಯೋಜನೆಯನ್ನು ಸರಿಯಾದ ಕ್ರಮದಲ್ಲಿ ಬಳಸಿಕೊಂಡಿರುವ ಸಾಮಾಜಿಕ ಅರಣ್ಯ ಇಲಾಖೆಯು 1000 ಗಿಡಗಳನ್ನು ಈ ಭಾಗದಲ್ಲಿ ನೆಟ್ಟಿದ್ದು, ಈ ಕಾಮಗಾರಿಯಲ್ಲಿ ಅಂದಾಜು ರೂ. 5 ಲಕ್ಷ ಮೊತ್ತದಲ್ಲಿ 892 ಮಾನವ ದಿನಗಳನ್ನು ಸೃಜನೆ ಮಾಡಿಕೊಡಲಾಗಿದೆ.
ಅರಣ್ಯ ಇಲಾಖೆಯು ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಗಿಡಗಳನ್ನು ನೆಡುವ ಮೂಲಕ ಸಾರ್ವಜನಿಕರಿಗೆ, ಪ್ರಾಣಿ, ಪಕ್ಷಿಗಳಿಗೆ ಹಣ್ಣು, ಆಹಾರ ಮತ್ತು ಆಶ್ರಯ ನಿಡಲು ಸಹಾಯಕವಾಗಿರುತ್ತವೆ. ಈ ರೀತಿಯಾಗಿ ಅರಣ್ಯ ಪ್ರದೇಶಗಳನ್ನು ಅಭಿವೃದ್ದಿ ಮಾಡುವುದರಿಂದ ಮುಂದಿನ ಪೀಳಿಗೆಗಾಗಿ ಕಾಡನ್ನು ಬೆಳೆಸಲು ಮತ್ತು ಉಳಿಸಿಕೊಳ್ಳಲು ಸಹಕಾರಿಯಾಗಿದೆ.
Klive Special Article ನಮ್ಮೂರಿನಲ್ಲಿ ಅರಣ್ಯಕ್ಕೇನೂ ಕೊರತೆ ಇಲ್ಲ. ಆದರೆ ಉದ್ಯೋಗ ಖಾತರಿ ಯೋಜನೆಯಡಿ ರಸ್ತೆ ಬದಿಗಳಲ್ಲಿ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಗಿಡ ನೆಡುವ ಮೂಲಕ ಉತ್ತಮವಾದ ನೆಡುತೋಪು ನಿರ್ಮಾಣ ಮಾಡಲು ಸಾದ್ಯವಾಗಿದೆ ಮತ್ತು ಸ್ಥಳೀಯವಾಗಿ ಜನರಿಗೆ ಕೂಲಿ ದೊರೆತ್ತಿದ್ದರಿಂದ ಅವರಿಗೆ ಆರ್ಥಿಕವಾಗಿ ಸಹಕಾರವಾಗಿದ್ದು ಸರ್ಕಾರಕ್ಕೆ ಧನ್ಯವಾದಗಳು ಮಾಸೂರಿನ ಸುಬ್ಬಯ್ಯ ಭಟ್ ನವರು ಹೇಳಿದ್ದಾರೆ.
2024-25 ನೇ ಸಾಲಿನಲ್ಲಿ ಕೆಳದಿ ಗ್ರಾಮ ಪಂಚಾಯಿತಿಯಲ್ಲಿ ಅಂದಾಜು ಮೊತ್ತ ರೂ. 3.00 ಲಕ್ಷ ಮೊತ್ತದಲ್ಲಿ ಕಾಲುವೆ ಹೂಳೆತ್ತುವ ಕಾಮಗಾರಿಯನ್ನು ಕೈಗೊಂಡಿದ್ದು, 750 ಮಾನವ ದಿನಗಳನ್ನು ಸೃಜಸಿ, ಒಟ್ಟು ರೂ. 2.74 ಲಕ್ಷ ವೆಚ್ಚ ಮಾಡಲಾಗಿದೆ.
ಸಾಗರ ತಾಲ್ಲೂಕಿನ ಕೆಳದಿ, ಮಾಸೂರು ಹಾಗೂ ಇತರೆಡೆ ನರೇಗಾ ಯೋಜನೆಯು ಯಶಸ್ವಿಯಾಗಿ ನಡೆಯುತ್ತಿದ್ದು, ಅಲ್ಲಿನ ಕೂಲಿ ಕಾರ್ಮಿಕರಿಗೆ ಉದ್ಯೋಗ ಒದಗಿಸುತ್ತಾ ಬಂದಿದೆ. 2024-25 ನೇ ಸಾಲಿನಲ್ಲಿ ನರೇಗಾ ಯೋಜನೆಯಿಂದ ಕಾಲುವೆ, ನೆಡುತೋಪು ಕಾಮಗಾರಿಗಳನ್ನು ಯಶಸ್ವಿಯಾಗಿ ಕೈಗೊಳ್ಳಲಾಗಿದೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ನಾಡಕಲಸಿ ಗ್ರಾಮ ಪಂಚಾಯಿತಿಯು ಸಾಗರ ತಾಲ್ಲೂಕು ಕೇಂದ್ರದಿAದ 10 ಕೀ.ಮೀ ದೂರವಿದೆ. ಭೌಗೋಳಿಕವಾಗಿ ಸಾಕಷ್ಟು ಚದುರಿದ ವಿಸ್ತೀರ್ಣ ಹೊಂದಿದ್ದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 14 ಕೆರೆಗಳಿದ್ದು, ಈ ಕೆರೆಗಳಿಂದ ಜಮೀನುಗಳಿಗೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ನರೇಗಾ ಯೋಜನೆಯ ಮೂಲಕ ಕಾಲುವೆ ನಿರ್ಮಾಣ ಮಾಡಿ ಅನುಕೂಲ ಮಾಡಿಕೊಡಲಾಗಿದೆ.
ಬಾಳಗೋಡು ಗ್ರಾಮದಲ್ಲಿನ ಕಪ್ಪೆಹೊಂಡದಿಂದ ಕೆಳಭಾಗದ ರೈತರ ಜಮೀನುಗಳಿಗೆ ನೀರು ನುಗ್ಗಿ ಸಾಕಷ್ಟು ಸಮಸ್ಯೆ ಉಂಟು ಮಾಡಿತ್ತು. ನರೇಗಾ ಯೋಜನೆಯಿಂದ ರೂ. 3.00 ಲಕ್ಷ ಮೊತ್ತದಲ್ಲಿ ಕಾಮಗಾರಿ ಕೈಗೊಂಡಿದ್ದು ಅನೇಕ ರೈತರ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ದೊರಕಿದೆ. ಈ ಭಾಗದಲ್ಲಿ ಸುಮಾರು 14 ರಿಂದ 15 ಪರಿಶಿಷ್ಟ ಜಾತಿಗೆ ಸೇರಿದ ರೈತರ ಜಮೀನುಗಳು ಇದ್ದು ಈ ಕಾಲುವೆ ನಿರ್ಮಾಣದಿಂದ ಅವರಿಗೆ ಅನುಕೂಲವಾಗಿದೆ. ಹಾಗೂ ಬೇಸಿಗೆ ಅವಧಿಯಲ್ಲಿ ಮೇಲಿನ ಕೆರೆಗಳಿಂದ ಕೆಳಭಾಗದ ರೈತರಿಗೆ ನೀರು ಹರಿಸುವ ಮೂಲಕ ಅನುಕೂಲವಾಗಿದೆ.
ಕಾಲುವೆ ನಿರ್ಮಾಣ ಕಳೆದ ಹಲವಾರು ವರ್ಷಗಳ ಬೇಡಿಯಾಗಿತ್ತು ಈ ವರ್ಷದಲ್ಲಿ ಅದು ಮುಕ್ತಾಯವಾಗಿದ್ದು ಮಳೆಗಾಲದಲ್ಲಿ ನಮ್ಮ ಜಮಿನುಗಳಿಗೆ ನೀರು ನುಗ್ಗವುದಿಲ್ಲ ಮತ್ತು ನಮ್ಮ ಜಮೀನಿಗೆ ಹಾಕಿದ ಸಾವಯವ ಗೊಬ್ಬರ ಹಾಳಾಗುವುದಿಲ.್ಲ ನರೇಗಾ ಯೋಜನೆಯಿಂದ ನಮಗೆ ತುಂಬಾ ಅನುಕೂಲವಾಗಿದೆ ಎಂದು ರೈತರಾದ ಬಾಳಗೋಡು ನವರು ಮಂಜಪ್ಪ ನವರು ತಿಳಿಸಿದ್ದಾರೆ.
ನರೇಗಾ ಯೋಜನೆ ಕೇವಲ ಜಿಲ್ಲೆಯಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ನಮ್ಮ ಜಿಲ್ಲೆಯಲ್ಲಿ ಕೆರೆ ಹೂಳೆತ್ತುವ, ಕಾಲುವೆ ನಿರ್ಮಾಣ ಸೇರಿದಂತೆ ಗ್ರಾಮೀಣ ಭಾಗದ ಜನ ಜೀವನ ಸುಗಮಗೊಳಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.
ಪ್ರವಾಹ, ಬರದಂತಹ ಪ್ರಾಕೃತಿಕ ವಿಕೋಪ ಸಂಭವಿಸಿ, ಘೋಷಣೆಯಾದ ಪ್ರದೇಶಗಳಲ್ಲಿ 150 ಮಾನವ ದಿನಗಳನ್ನು ಸೃಜಿಸಲಾಗುತ್ತದೆ. ಪ್ರಸ್ತುತ ಪ್ರತಿ ಕಾರ್ಮಿಕರಿಗೆ ದಿನವೊಂದಕ್ಕೆ ರೂ.370 ಕೂಲಿ ಪಾವತಿ ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ
ಹೇಮಂತ್ ಎನ್ ತಿಳಿಸಿದ್ದಾರೆ.
