Basaveshwara Veerashaiva Lingayat Samaja ಶ್ರೀ ಬಸವೇಶ್ವರ ವೀರಶೈವ ಲಿಂಗಾಯಿತ ಸಮಾಜ ಸೇವಾಸಂಘದ ವತಿಯಿಂದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್ ಹಾಲ್ನಲ್ಲಿ ಜು.31ರಂದು ಸಂಜೆ 5 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಸಮಾಜದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ.
2024-25ರ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾದ ಸಂಘದ ಸದಸ್ಯರ ಮಕ್ಕಳು ನೆಹರೂ ರಸ್ತೆ, ಬಸವಸದನ ಸಮಾಜದ ಕಛೇರಿಯಲ್ಲಿ ಅರ್ಜಿ ಸಲ್ಲಿಸುವಂತೆ ಸಮಾಜದ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಕಾರ್ಯದರ್ಶಿ ಎಸ್.ಪಿ. ದಿನೇಶ್ ಕೋರಿದ್ದಾರೆ.
Basaveshwara Veerashaiva Lingayat Samaja ಈ ಕಾರ್ಯಕ್ರಮ ಜು. 27ರಂದು ಏರ್ಪಡಿಸಿದ್ದು, ಇದೀಗ ಜು.31ಕ್ಕೆ ಈ ಕಾರ್ಯಕ್ರಮ ಜರುಗಲಿದೆ. ಮಾನ್ಯ ಸದಸ್ಯರು ದಿನಾಂಕ ಬದಲಾವಣೆ ಗಮನಿಸಲು ಪ್ರಕಟಣೆಯಲ್ಲಿ ಕೋರಿದೆ.
ಜು.31ರ ಸಂಜೆ ಜರುಗುವ ಕಾರ್ಯಕ್ರಮದಲ್ಲಿ ಸಮಾಜಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಕೋರಿದ್ದಾರೆ.
